ಉಡುಪಿ: ಕರ್ನಾಟಕ ಮುಸ್ಲಿಂ ಜಮಾಅತ್ ಬ್ರಹ್ಮಾವರ ಝೋನ್ ಸಮಿತಿಯ ವತಿಯಿಂದ ದ್ವೇಷ ಬಿಟ್ಟು ದೇಶ ಕಟ್ಟು ಎಂಬ ಘೋಷ ವಾಕ್ಯದೂಂದಿಗೆ ಬ್ರಹ್ಮಾವರದ ಆಶ್ರಯ ಸಭಾಂಗಣದಲ್ಲಿ ಪ್ರಜಾಭಾರತ ಕಾರ್ಯಕ್ರಮ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಸೋಮನಾಥ ಹೆಗ್ಡೆಯವರು, ಭಾರತ ಸೌಹಾರ್ದತೆಯ ನೆಲೆಯಾಗಿದೆ.ಇಲ್ಲಿ ವಾಸಿಸುವ ಸರ್ವರೂ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಿ ತಮ್ಮಳೂಗಿನ ದ್ವೇಶವನ್ನು ಬಿಟ್ಟು ಈ ದೇಶವನ್ನು ಕಟ್ಟಬೇಕಂದು ಕರೆನೀಡಿದರು.
ಕಾರ್ಯದರ್ಶಿ ಇಸ್ಮಾಯಿಲ್ ಕೋಡಿ ಸ್ರಷ್ಟೀಕರ್ತನ ನಾಮದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜಿಲ್ಲಾ ಕಾರ್ಯದರ್ಶಿ ವಕೀಲರಾದ ಇಲ್ಯಾಸ್ ನಾವುಂದ ಮಾತನಾಡಿ, ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂಷಿಸದೆ ವಿವಿಧ ಧರ್ಮಗಳ ಕೆಟ್ಟ ಜನರಿಂದ ನಡೆಯುತ್ತಿರುವ ಕ್ರೌರ್ಯವನ್ನು ಕೊನೆಗೊಳಿಸಲು ಸ್ವಸ್ಥ ಸಮಾಜ ಪ್ರಯತ್ನಿಸಬೇಕೆಂದು ಹೇಳಿದರು.
ರಾಜ್ಯ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ರಾಮಚಂದ್ರ ಕಾಂಚನ್ ಹೊನ್ನಾಳ ಹಾಗೂ ಅಬ್ದುಲ್ ಸಲೀಮ್ ಮಟಪಾಡಿಯವರನ್ನು ಸನ್ಮಾನಿಸಲಾಯಿತು.
ಝೋನ್ ಅಧ್ಯಕ್ಷರಾದ ಜೆ. ಮುಷ್ತಾಕ್ ಅಹ್ಮದ್ ಹೊನ್ನಾಳ ಅಧ್ಯಕ್ಷತೆ ವಹಿಸಿದ್ದರು.


ಕಾರ್ಯಕ್ರಮದಲ್ಲಿ ರಾಜಾರಾಮ್ ಶೆಟ್ಟಿ ಬ್ರಹ್ಮಾವರ. ಕೋಟಿ ಪೂಜಾರಿ ಮದುವನ.ನಾಗರಾಜ್ ಶೆಟ್ಟಿ ಹೊನ್ನಾಳ.ಹಾಜಿ ಸಾಹೇಬ್ ಮದುವನ. ಅಶ್ರಫ್ ಹೂಡೆ. ವಿಶ್ವನಾಥ್ ಶೆಟ್ಟಿ ಮಟಪಾಡಿ.ನಜೀರ್ ಸಾಹೇಬ್ ಬ್ರಹ್ಮಾವರ.ಶೌಕತಲಿ ಬಾರ್ಕೂರ್. ಜಮಾಲ್ ಸಾಹೇಬ್ ಬ್ರಹ್ಮಾವರ. ಗಣೇಶ್ ಶೆಟ್ಟಿ ಹೊನ್ನಾಳ. ಚಂದ್ರಶೇಖರ್ ಶೆಟ್ಟಿ ಹೊನ್ನಾಳ.ಚಂದ್ರ ಶೆಟ್ಟಿ ಮದುವನ.ರಿತೇಶ್ ಹೊನ್ನಾಳ.ದಿನೇಶ್ ಹೊನ್ನಾಳ.ಲಕ್ಷಣ ಶೆಟ್ಟಿ ಮದುವನ.ಅಝ್ಮಲ್ ಅಸ್ಸಾದಿ ಬ್ರಹ್ಮಾವರ. ಬಿ. ಎನ್ ಶಬ್ಬಿರ್ ಉಡುಪಿ . ಮುಷ್ತಾಕ್ ಉಪ್ಪಿನಕೋಟೆ.ಎಂ.ಕೆ ಮುಹಮ್ಮದ್ ಮದುವನ ಮುಹಮ್ಮದ್ ಅಲ್ತಾಫ್ ಮಟಪಾಡಿ ಗುರುಚರಣ್ ಶೆಟ್ಟಿ ಹೊನ್ನಾಳ.ಉಮರುಲ್ ಫಾರೂಕ್ ರಂಗನಕೆರೆ.ಹುಸೈನ್ ಪಡುಕೆರೆ.ಜಮಾಲ್ ಮದುವನ. ಇಮ್ರಾನ್ ಹೊನ್ನಾಳ. ಹಮೀದ್ ಸೈಯದ್. ಹಾಗೂ ಬ್ರಹ್ಮಾವರ ಝೋನ್ ನ ಎಲ್ಲಾ ಪದಾಧಿಕಾರಿಗಳು ವಿವಿಧ ಮೊಹಲ್ಲಾದ ನಾಯಕರು ಸಂಘಟನೆಗಳ ಪ್ರಮುಖರು ಭಾಗವಹಿಸಿ ಶುಭಹಾರೈಸಿದರು. ಕಾರ್ಯದರ್ಶಿ ಇಬ್ರಾಹಿಂ ಆದಂ ಮಟಪಾಡಿ ಸ್ವಾಗತಿಸಿದರು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ