ಪುತ್ತೂರು: ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಪ್ಟೆಂಬರ್ 02 ಶನಿವಾರ ಪುತ್ತೂರು ಟೌನ್ ಹಾಲ್ನಲ್ಲಿ ಬೆಳಗ್ಗೆ ಎಂಟು ಗಂಟೆಯಿಂದ ಸಂಜೆ ನಾಲ್ಕು ಗಂಟೆ ತನಕ ಕೇರಳ ಕರ್ನಾಟಕದ ಪ್ರಗಲ್ಭ ವಿದ್ವಾಂಸರು, ದಾರ್ಶನಿಕರು, ಸಾಹಿತಿಗಳು ಹಾಗೂ ಚಿಂತಕರಿಂದ ಆಧ್ಯಾತ್ಮಿಕತೆ, ಆದರ್ಶ, ಆರೋಗ್ಯ, ಸಂಘಟನೆ, ಸಾಹಿತ್ಯ ಮುಂತಾದ ವಿವಿಧ ವಿಷಯಗಳಲ್ಲಿ ತರಗತಿಗಳು ನಡೆಯಲಿದೆ.

ಕರ್ನಾಟಕ ಎಸ್ ವೈ ಎಸ್ ತನ್ನ ಮೂವತ್ತನೇ ವಾರ್ಷಿಕ ಆಚರಿಸುವ ಅಂಗವಾಗಿ ಬೆಳಗ್ಗೆ ಎಂಟು ಗಂಟೆಗೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಮೂವತ್ತು ಧ್ವಜಸ್ಥಂಭಗಳಲ್ಲಿ ಧ್ವಜಾರೋಹಣ ನಡೆಯಲಿದೆ. ಒಂಬತ್ತು ಗಂಟೆಗೆ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ರವರ ನೇತೃತ್ವದಲ್ಲಿ ಜಿಲ್ಲಾ ಪ್ರತಿನಿಧಿ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದೆ.ನಂತರ ವಿವಿಧ ವಿಷಯಗಳಲ್ಲಿ ತರಗತಿ ನಡೆಯಲಿದೆ.
ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ತ್ವಾಹಿರ್ ಸಖಾಫಿ ಮಂಜೇರಿ, ಡಾ.ಸಯ್ಯಿದ್ ಸೈಫುಲ್ಲಾ ಮರ್ಕಝ್ ನಾಲೆಡ್ಜ್ ಸಿಟಿ, ಮರ್ಝೂಕ್ ಸಅದಿ ಕಾರಂದೂರು ಮರ್ಕಝ್, ರಾಶಿದ್ ಬುಖಾರಿ ಕುಟ್ಯಾಡಿ, ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹಾಫಿಲ್ ಸುಫ್ಯಾನ್ ಸಖಾಫಿ, ಎಕೆ ಸರ್ ನಂದಾವರ ವಿವಿಧ ವಿಷಯಗಳಲ್ಲಿ ತರಗತಿ ನಡೆಸಿಕೊಡಲಿದ್ದಾರೆ.ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಹಫೀಳ್ ಸಅದಿ ಕೊಡಗು,ಕೆ ಎಂ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ,ಎಂ ಬಿ ಎಂ. ಸಾದಿಕ್ ಮಾಸ್ಟರ್,ಅಡ್ವಕೇಟ್ ಹಂಝತ್,ಎಫ್ ಎಚ್ ಮುಹಮ್ಮದ್ ಮಿಸ್ಬಾಹಿ ಮುಂತಾದ ಉಲಮಾ ಉಮರಾ ನೇತಾರರು,ಮಾನ್ಯ ಪುತ್ತೂರು ಶಾಸಕರಾದ ಶ್ರೀ ಆಶೋಕ್ ರೈ,ಶ್ರೀ ಎಂ ಬಿ ವಿಶ್ವನಾಥ ರೈ,ಶಕೂರ್ ಹಾಜಿ ಪಡೀಲ್, ಮುಂತಾದ ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.
ಸಂಜೆ ನಾಲ್ಕು ಗಂಟೆ ಸುನ್ನೀ ಸಂಘ ಕುಟುಂಬದ ವತಿಯಿಂದ ಪುತ್ತೂರು ಕಿಲ್ಲೆ ಮೈದಾನದಿಂದ ದರ್ಬೆ ವೃತ್ತದ ತನಕ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಬೃಹತ್ ಗೋಲ್ಟನ್ ರ್ಯಾಲಿ ನಡೆಯಲಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ