ಮಹಬುಲ: ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಕುವೈಟ್ ರಾಷ್ಟ್ರೀಯ ಸಮಿತಿ ಹಮ್ಮಿಕೊಂಡ SSF ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ G-Meet ಕಾರ್ಯಕ್ರಮವು ಸೆ.2 ರಂದು ಮಹಬುಲ ಕಲಾ ಆಡಿಟೋರಿಯಂನಲ್ಲಿ ಬಹು ಹುಸೈನ್ ಮುಸ್ಲಿಯಾರ್ ಎರ್ಮಾಡ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಶಿಕ್ಷಣ ವಿಭಾಗದ ಅಧ್ಯಕ್ಷರಾದ ಬಹು ಬಾದುಷಾ ಸಖಾಫಿ ಅವರು ದುಆ ನೆರವೇರಿಸಿ,ಜನಾಬ್ ಯಾಕೂಬ್ ಕಾರ್ಕಳ ಪ್ರ:ಕಾರ್ಯದರ್ಶಿ ಅತಿಥಿಗಳನ್ನು ಸ್ವಾಗತಿಸಿದರು. ಬಹು ಉಮರ್ ಝುಹ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘಟನ ವಿಭಾಗ ಅಧ್ಯಕ್ಷರು ಆಸಂಷಾ ಭಾಷಣ ಮಾಡಿ SSF ಬಗ್ಗೆ ವಿವರಿಸಿದರು,ಬಹು ಬಾದುಷ ಸಖಾಫಿ ಮಾತನಾಡಿ, SSF ನಡೆದು ಬಂದ ದಾರಿಯ ಬಗ್ಗೆ ವಿವರಿಸಿದರು. SSF ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ ಇದರ ಪ್ರಚಾರಕ್ಕಾಗಿ ಆಗಮಿಸಿದ ರಿಸೀಪ್ಷನ್ ಕನ್ವಿನರ್ ಬಹು ಫಾರೂಕ್ ಅಮಾನಿ ಬೆಂಗಳೂರು ಮಾತನಾಡಿ, ಜೀವನ ಶೈಲಿ ಮತ್ತು SSF ಸಂಘಟನೆ ನಮ್ಮ ಜೀವನದ ಶಿಷ್ಟಚಾರವನ್ನು ಬದಲಾಯಿಸಿ ಮನುಷ್ಯನಿಗೆ ಉತ್ತಮ ಜೀವನ ನಡೆಸುವ ಅರಿವು ಮೂಡಿಸಲು ಉತ್ತಮ ಅವಕಾಶವಾಗಿದೆ ಎಂದರು.
SSF ಸಂಘಟನೆಯ ಸದಸ್ಯತ್ವ ಹೊಂದಿರುವ ಮಕ್ಕಳು, ಮದ್ಯಪಾನ, ಅಮಲು ಪದಾರ್ಥ ಬಗ್ಗೆ ಜಾಗೃತಿಗೊಂಡಿರುತ್ತಾರೆ. ಸ್ವಾತಂತ್ರ್ಯ ಭಾರತದಲ್ಲಿ ಮುಸ್ಲಿಮರ ಪಾತ್ರದ ಬಗ್ಗೆ ವಿವರಿಸಿದ ಅವರು, ನಾವೆಲ್ಲರೂ ಬಾರತಿಯರು ಸೌಹಾರ್ದ, ಪ್ರೀತಿಯಿಂದ ಜೀವಿಸುವುದು ನಮ್ಮ ಹಕ್ಕಾಗಿದೆ ಎಂದು ವಿವರಿಸಿದರು.



KCF ಅಧ್ಯಕ್ಷರು ಬಹು ಜನಾಬ್ ಹುಸೈನ್ ಎರುಮಾಡ್ ಮಾತನಾಡಿ SSF ಹಾಗೂ KCF ಸದಸ್ಯರಿಗೆ ಇದು ಮಾದರಿ ಸಂಘಟನೆ ಎಂದು ಮನವರಿಕೆ ಮಾಡಿದರು.
ವೇದಿಕೆ ಯಲ್ಲಿ ಪ್ರಚಾರ ಮತ್ತು ಪ್ರಸಾರ ವಿಭಾಗದ ಅಧ್ಯಕ್ಷ ಸಾಹುಲ್ ಹಮೀದ್ ಸಅದಿ ಝುಹ್ರಿ ಜಹರ ಸೆಕ್ಟರ್ ಅಧ್ಯಕ್ಷ ಶಫೀಕ್ ಅಹ್ಸನಿ ಹಾಗೂ ಕೆಸಿಎಫ್ ಇಂಟರ್ನ್ಯಾಷನಲ್ ಕೌನ್ಸಿಲ್ (INC) ಸದಸ್ಯರು ಆದ ಝಕರಿಯಾ ಅನೇಕಲ್ ಉಪಸ್ಥಿತಿ ಇದ್ದು ಕೊನೆಯಲ್ಲಿ , ಬಹುಮಾನ್ಯ ಮಾಹಿನ್ ಸಖಾಫಿ ಉಸ್ತಾದರು ದುವಾ ಗೈದರು , ಧನ್ಯವಾದವನ್ನು ಆಡಳಿತ ವಿಭಾಗ ಅಧ್ಯಕ್ಷ ಅಬ್ಬಾಸ್ ಬಳಂಜ ನೆರವೇರಿಸಿದರು.
ವರದಿ :ಇಬ್ರಾಹಿಂ ವೇಣೂರು ಕುವೈಟ್
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ