ಶಾರ್ಜಾ(ಯು ಎ ಇ): ಶಾರ್ಜಾ ಸಅದಿಯ್ಯ ಕಮಿಟಿ .ಮತ್ತು ICF KCF RSC ಸಂಘಟನೆಗಳ ಸಹಭಾಗಿತ್ವದಲ್ಲಿ ವರ್ಷಂಪ್ರತಿ ಬಹಳ ವಿಜೃಂಭಣೆಯಿಂದ ನಡೆಸಲ್ಪಡುವ ತಾಜುಲ್ ಉಲಮಾ,ನೂರುಲ್ ಉಲಮಾ ಅನುಸ್ಮರಣಾ ಮಜ್ಲಿಸ್ 2023ರ ಅಕ್ಟೋಬರ್ 20 ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಶಾರ್ಜಾ ಕ್ಲಾಕ್ ಟವರ್ ಸಮೀಪದ ನೂರ್ ಹಿಲಾಲ್ ಪಾರ್ಟಿ ಹಾಲ್ ನಲ್ಲಿ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಜಾಮಿಅ ಸಅದಿಯ್ಯ ಸಂಸ್ಥೆಯ ಅಧ್ಯಕ್ಷರೂ ಸಮಸ್ತ ಉಪಾಧ್ಯಕ್ಷರಾದ ಬಹು; K S ಆಟಕೋಯ ತಂಙಳ್ ಕುಂಬೋಲ್ ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗಾಗಿ, ಸೆಪ್ಟೆಂಬರ್ 2 ರಂದು ಶಾರ್ಜಾ ಮುಹಿಮ್ಮಾತ್ ಸೆಂಟರ್ ನಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಶಿರಿಯಾ ಅಬೂಬಕ್ಕರ್ ಉಸ್ತಾದರು ದುಅಃ ನೆರವೇರಿಸಿದರು. ಶಾರ್ಜಾ ಸಅದಿಯ್ಯ ಸಮಿತಿ ಅಧ್ಯಕ್ಷರಾದ ಅಬ್ದುಲ್ಲ ಹಾಜಿ ಉಳ್ವಾರ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ನುಅ್ ಮಾನ್ ಕೊಲ್ಲಂಬಾಡಿ ಸ್ವಾಗತಿಸಿದರು. ಅಬೂಬಕ್ಕರ್ ಮದನಿ ತೋಕೆ (ಪಯಕಡಪುರಂ) ಉದ್ಘಾಟಿಸಿದರು. ಸಯ್ಯಿದ್ ಜಿಫ್ರಿ ತಂಙಳ್ ಬೇಕಲ್ ಪ್ರಸ್ತಾವಿಕ ಬಾಷಣ ಮಾಡಿದರು.
ಸಭೆಯಲ್ಲಿ ಶೈಖ್ ಇಮಾಮ್ ಬೇಕಲ್, ಅಬ್ದುಲ್ ಖಾದರ್ ಹಾಜಿ ಕಾಞಂಗಾಡ್, ಸಅದಿಯ್ಯ ಶಾರ್ಜಾ ಓರ್ಗೈಸರ್ ಅಬ್ಬಾಸ್ ಮುಸ್ಲಿಯಾರ್ ಮಂಜನಾಡಿ ಹಾಗೂ ICF, KCF, RSC, ಸಅದಿಯ್ಯ ಅಲುಮ್ನಿ ಮೊದಲಾದ ಸಂಘಟನೆಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ