ಶಾರ್ಜಾ(ಯು ಎ ಇ): ಶಾರ್ಜಾ ಸಅದಿಯ್ಯ ಕಮಿಟಿ .ಮತ್ತು ICF KCF RSC ಸಂಘಟನೆಗಳ ಸಹಭಾಗಿತ್ವದಲ್ಲಿ ವರ್ಷಂಪ್ರತಿ ಬಹಳ ವಿಜೃಂಭಣೆಯಿಂದ ನಡೆಸಲ್ಪಡುವ ತಾಜುಲ್ ಉಲಮಾ,ನೂರುಲ್ ಉಲಮಾ ಅನುಸ್ಮರಣಾ ಮಜ್ಲಿಸ್ 2023ರ ಅಕ್ಟೋಬರ್ 20 ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಶಾರ್ಜಾ ಕ್ಲಾಕ್ ಟವರ್ ಸಮೀಪದ ನೂರ್ ಹಿಲಾಲ್ ಪಾರ್ಟಿ ಹಾಲ್ ನಲ್ಲಿ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಜಾಮಿಅ ಸಅದಿಯ್ಯ ಸಂಸ್ಥೆಯ ಅಧ್ಯಕ್ಷರೂ ಸಮಸ್ತ ಉಪಾಧ್ಯಕ್ಷರಾದ ಬಹು; K S ಆಟಕೋಯ ತಂಙಳ್ ಕುಂಬೋಲ್ ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗಾಗಿ, ಸೆಪ್ಟೆಂಬರ್ 2 ರಂದು ಶಾರ್ಜಾ ಮುಹಿಮ್ಮಾತ್ ಸೆಂಟರ್ ನಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಶಿರಿಯಾ ಅಬೂಬಕ್ಕರ್ ಉಸ್ತಾದರು ದುಅಃ ನೆರವೇರಿಸಿದರು. ಶಾರ್ಜಾ ಸಅದಿಯ್ಯ ಸಮಿತಿ ಅಧ್ಯಕ್ಷರಾದ ಅಬ್ದುಲ್ಲ ಹಾಜಿ ಉಳ್ವಾರ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ನುಅ್ ಮಾನ್ ಕೊಲ್ಲಂಬಾಡಿ ಸ್ವಾಗತಿಸಿದರು. ಅಬೂಬಕ್ಕರ್ ಮದನಿ ತೋಕೆ (ಪಯಕಡಪುರಂ) ಉದ್ಘಾಟಿಸಿದರು. ಸಯ್ಯಿದ್ ಜಿಫ್ರಿ ತಂಙಳ್ ಬೇಕಲ್ ಪ್ರಸ್ತಾವಿಕ ಬಾಷಣ ಮಾಡಿದರು.
ಸಭೆಯಲ್ಲಿ ಶೈಖ್ ಇಮಾಮ್ ಬೇಕಲ್, ಅಬ್ದುಲ್ ಖಾದರ್ ಹಾಜಿ ಕಾಞಂಗಾಡ್, ಸಅದಿಯ್ಯ ಶಾರ್ಜಾ ಓರ್ಗೈಸರ್ ಅಬ್ಬಾಸ್ ಮುಸ್ಲಿಯಾರ್ ಮಂಜನಾಡಿ ಹಾಗೂ ICF, KCF, RSC, ಸಅದಿಯ್ಯ ಅಲುಮ್ನಿ ಮೊದಲಾದ ಸಂಘಟನೆಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)