ಮಂಗಳೂರು: ವಖ್ಫ್ ಆಸ್ತಿ ಅಂದರೆ ಅದು ಮುಸ್ಲಿಮ್ ಹಿರಿಯರು ದೇವನಿಗಾಗಿ ಅರ್ಪಿಸಿದ ಆಸ್ತಿಯಾಗಿದೆ ಹೊರತು ಯತ್ನಾಳ್ ಹಿರಿಯರ ಆಸ್ತಿಯಲ್ಲ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಿಗೆ ತಿರುಗೇಟು ನೀಡಿದ್ದಾರೆ.
ಇತ್ತೀಚೆಗೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಹಾಡಿ ಹೊಗಳುವ ಭರದಲ್ಲಿ ಕೇಂದ್ರ ಸರ್ಕಾರದ ಅಷ್ಟೂ ವರ್ಷಗಳ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಮತ್ತು ರಾಜ್ಯದಲ್ಲಿ ಕೋಮು ವಿದ್ವೇಶವನ್ನು ಮುಂದುವರಿಸುವ ಭಾಗವಾಗಿ ಪ್ರಧಾನ ಮಂತ್ರಿ ಮೋದಿಗೆ ತಾನು ಪತ್ರ ಬರೆದು ವಕ್ಫ್ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದೇನೆಂದು ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಖ್ಫ್ ಆಸ್ತಿಗಳು ಈ ದೇಶದಲ್ಲಿ ಜೀವಿಸಿ, ಗತಿಸಿ ಹೋದ ಮುಸ್ಲಿಮರು ಮತ್ತು ಹಾಲಿ ಭಾರತದ ಪ್ರಜೆಗಳಾದ ಮುಸ್ಲಿಮರ ಕೊಡುಗೆಯಾಗಿದೆ. ಪ್ರಸ್ತುತ ಅಷ್ಟೂ ವಕ್ಫ್ ಆಸ್ತಿಗಳನ್ನು ಮುಸ್ಲಿಮ್ ಸಂಸ್ಥೆಗಳು ನಿರ್ವಹಿಸಿ ಜನರ ಧಾರ್ಮಿಕ ಸವಲತ್ತುಗಳನ್ನು ಪೂರೈಸುತ್ತಿದೆ.
ಯತ್ನಾಳ್, ವಕ್ಫ್ ಆಸ್ತಿ ರದ್ದತಿಯಿಂದ ಸರಕಾರಕ್ಕೆ ಕರ್ಚು ಉಳಿತಾಯವಾಗಲಿದೆ ಎಂದು ಹೇಳಿದ್ದಾರೆ. ವಕ್ಫ್ ಸಂಸ್ಥೆಯೇ ಸರಕಾರದ ಅಧೀನದಲ್ಲಿರುವಾಗ ವಕ್ಫ್ ರದ್ದತಿ ಪ್ರಸ್ತಾಪ ಯಾಕೆ ಎಂದು ಯತ್ನಾಳ್ ಹೇಳಬೇಕು. ವಕ್ಫ್ ರದ್ದತಿ ಕೋರಲು ವಕ್ಫ್ ಆಸ್ತಿಗಳು ಯತ್ನಾಳ್ ಹಿರಿಯರ ಆಸ್ತಿ ಏನು ಅಲ್ಲ. ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರ ಚಿಂತನೆಯಿಂದ ಮರೆ ಮಾಚಲು ಯತ್ನಾಳ್ ಕೇಶವಕೃಪ ಸಲಹೆಯಂತೆ ಹೇಳಿಕೆ ನೀಡಿ ಜನರನ್ನು ಮುಸ್ಲಿಮ್ ವಿದ್ವೇಶದ ಕಡೆಗೆ ವಾಲಿಸುವ ಪ್ರಯತ್ನದ ಭಾಗವಾಗಿದೆ ಈ ಹೇಳಿಕೆ. ಯತ್ನಾಳ್ ವಾಸ್ತವ ಸತ್ಯ ಅರಿತು ವಕ್ಫ್ ಆಸ್ತಿಯು ಜನರ ಸೌಹಾರ್ದತೆಗೆ ಪೂರಕವಾಗಿ ಅಸ್ತಿತ್ವದಲ್ಲಿ ಇದೆ ಎಂಬುದನ್ನು ತಿಳಿಯಬೇಕು ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ