ಕೊಡಗು: ಸೆಪ್ಟೆಂಬರ್ 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ SSF 50ನೇ ವರ್ಷಾಚರಣೆ ಗೋಲ್ಡನ್ ಫಿಫ್ಟಿ ಐತಿಹಾಸಿಕ ಮಹಾ ಸಮ್ಮೇಳನದ ಪ್ರಚಾರಾರ್ಥ SSF ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಂದೇಶ ವಾಹನ ಜಾಥಾ ನಡೆಯಿತು.
ಜಿಲ್ಲಾದ್ಯಕ್ಷರಾದ ಝುಬೈರ್ ಸಅದಿ ಉಸ್ತಾದರ ಪ್ರಾರ್ಥನೆಯೊಂದಿಗೆ ಪೊನ್ನಂಪೇಟೆ ಪಟ್ಟಣದಿಂದ ಪ್ರಾರಂಭಗೊಂಡ ವಾಹನ ಜಾಥಾ ಗೋಣಿಕೊಪ್ಪ, ವಿರಾಜಪೇಟೆ, ಅಮ್ಮತ್ತಿ, ಪಾಲಿಬೆಟ್ಟ, ಸಿದ್ದಾಪುರ, ನೆಲ್ಯಹುದಿಕೇರಿ, ಕುಶಾಲನಗರ, ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ, ಮಾದಾಪುರ, ಸುಂಟಿಕೊಪ್ಪ, ಮಡಿಕೇರಿ, ಮೂರ್ನಾಡು, ಮಾರ್ಗವಾಗಿ ಬಂದ ವಾಹನ ಜಾಥಾ ನಾಪೋಕ್ಲುವಿನಲ್ಲಿ ಸಮಾಪ್ತಿಗೊಂಡಿತು.
ಈ ಎಲ್ಲಾ ಪಟ್ಟಣಗಳಲ್ಲಿಯೂ ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಮ್ಮೇಳನದ ಕುರಿತು ಭಾಷಣ ನಡೆಸಿದರು. ಭಾಷಣಗಾರರಾಗಿ… ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ, ವಿರಾಜಪೇಟೆ ಡಿವಿಷನ್ ಅದ್ಯಕ್ಷರಾದ ಕಮರುದ್ದೀನ್ ಅನ್ವಾರಿ ಅಹ್ಸನಿ ಮಡಿಕೇರಿ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ಲಾ ಹಿಮಮಿ ಸಖಾಫಿ, ಆಗಮಿಸಿದ್ದರು.
ಒಂದೊಂದು ಪಟ್ಟಣದಲ್ಲಿಯೂ ಆಲ್ಲಿನ ಕಾರ್ಯಕರ್ತರೂ ಸಾತ್ ನೀಡಿದರು.
ಗೋಲ್ಡನ್ ಫಿಫ್ಟಿ ಸಮ್ಮೇಳನದ ಯಶಸ್ವಿಗೆ ಸರ್ವರಿಗೂ ಕರೆ ನೀಡಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ