ಬೆಂಗಳೂರು:ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಐತಿಹಾಸಿಕ ಸುವರ್ಣ ಮಹೋತ್ಸವ ‘ಗೋಲ್ಡನ್ ಫಿಫ್ಟಿ’ ಸಮ್ಮೇಳನವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬೆಳಗ್ಗೆ ಅದ್ದೂರಿಯಾಗಿ ಚಾಲನೆಗೊಂಡಿದೆ.

ಬೆಳಗ್ಗೆ ಆರಂಭಗೊಂಡ ಉದ್ಘಾಟನಾ ಸಮಾವೇಶದಲ್ಲಿ, ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಸಚಿವರಾದ ಬಿ. ಝಡ್. ಝಮೀರ್ ಅಹ್ಮದ್ ಖಾನ್ ಮಾತನಾಡಿ, ರಾಜ್ಯದ ಎಲ್ಲಾ ಮಸೀದಿಗಳ ಮುಅಝಿನ್ ಗಳಿಗೆ ರಾಜ್ಯ ವಖ್ಫ್ ಇಲಾಖೆ ವತಿಯಿಂದ ಮನೆ ನಿರ್ಮಿಸಿ ಕೊಡುವ ಕಾರ್ಯವನ್ನು ಶೀಘ್ರವಾಗಿಯೆ ನಡೆಸಲಿದ್ದೇವೆ ಎಂದು ಘೋಷಿಸಿದರು.
ಮದ್ರಸಾ ರಂಗವನ್ನು ಕೇರಳ ಮಾದರಿಯಂತೆ ಇನ್ನಷ್ಟು ಉನ್ನತಿಗೊಳಿಸಲಿದ್ದೇವೆ ಎಂದ ಸಚಿವರು, ಕೇರಳದ ಮಅದಿನ್ ಸಂಸ್ಥೆಯ ವರ್ಣನೆ ಮತ್ತು ವಿದ್ಯಾಭ್ಯಾಸದ ತತ್ವ ಮತ್ತು ಆಚಾರಗಳನ್ನು ಕರ್ನಾಟಕಾದ್ಯಂತ ಅಳವಡಿಸಲು ಇದೀಗಾಗಲೇ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದರು.


ಮಸೀದಿಗಳಲ್ಲಿ ಮುಅಝಿನ್ ಕೆಲಸಮಾಡುವವರಿಗೆ ದೊರೆಯುವ ಸಣ್ಣ ವೇತನಗಳಿಂದ ಅವರ ಕುಟುಂಬ ನಿರ್ವಹಿಸುವುದೇ ಬಹಳ ಕಷ್ಟದ ಪರಿಸ್ಥಿತಿ, ಈ ನಿಟ್ಟಿನಲ್ಲಿ ಮುಅಝಿನ್ ಉಸ್ತಾದರುಗಳಿಗೆ ಸರಕಾರದಿಂದಲೇ ಮನೆ ನಿರ್ಮಿಸಿಕೊಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದಲ್ಲಿ ವಖ್ಫ್ ಸಚಿವರು ಹೇಳಿದರು.
ಎಸ್ಎಸ್ಎಫ್ ವಿದ್ಯಾರ್ಥಿಗಳ ಶಿಸ್ತನ್ನು ಕಂಡು ಅಚ್ಚರಿಗೊಂಡ ಸಚಿವರು, ಈ ಸಂಘಟನೆ ರಾಜ್ಯಕ್ಕೆ ಸಾಮಾಜಿಕವಾಗಿಯೂ, ಶೈಕ್ಷಣಿಕವಾಗಿಯೂ ಅತೀ ಅಗತ್ಯ ಎಂದರು.


ಕಾರ್ಯಕ್ರಮದಲ್ಲಿ ಮಅದಿನ್ ಸಂಸ್ಥೆಯ ಚೇರ್ಮ್ಯಾನ್ ಸಯ್ಯಿದ್ ಖಲೀಲುಲ್ ಬುಖಾರಿ ಅವರು ಕಾರ್ಯಕರ್ತರಿಗೆ ಉತ್ತಮ ಸಂದೇಶವನ್ನು ನೀಡಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ