ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಸಮಿತಿಯ ಅಧೀನದಲ್ಲಿ ಅಕ್ಟೋಬರ್ 2 ರಂದು ಮಧ್ಯಾಹ್ನ 2 ಘಂಟೆಗೆ ಮಂಗಳೂರಿನಲ್ಲಿ ವಿಜೃಂಭಣೆಯಿಂದ ಇಲಲ್ ಹಬೀಬ್ ಮೀಲಾದ್ ರ್ಯಾಲಿ ಹಾಗೂ ಪ್ರವಾದಿ ಸಂದೇಶ ಭಾಷಣ ನಡೆಸಲು ಇಂದು ಜಂಇಯ್ಯತುಲ್ ಉಲಮಾ ಕಛೇರಿಯಲ್ಲಿ ನಡೆದ ಸುನ್ನೀ ಸಂಘಟನೆಗಳ ಜಂಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಹಿರಿಯ ವಿದ್ವಾಂಸ ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿ ಅಲ್ ಕಾಮಿಲ್ ಅಧ್ಯಕ್ಷತೆ ವಹಿಸಿದರು. ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು ಉದ್ಘಾಟಿಸಿದರು. ಮುಸ್ಲಿಂ ಜಮಾಅತಿನ ಅಶ್ರಫ್ ಕಿನಾರ, ಖಲೀಲ್ ಮಾಲಿಕಿ ಬೋಳಂತೂರು, ಎಸ್ ವೈ ಎಸ್ ಜಿಲ್ಲಾ ಪ್ರ.ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್, ಎಸ್ ಎಸ್ ಎಫ್ ಜಿಲ್ಲಾ ಪ್ರ.ಕಾರ್ಯದರ್ಶಿ ಸುಹೈಲ್ ಫರಂಗಿಪೇಟೆ, ಮಹಬೂಬ್ ಸಖಾಫಿ ಕಿನ್ಯ, ಮುಂತಾದವರು ಮಾತನಾಡಿದರು.ಎಸ್ ಎಸ್ ಎಫ್ ಜಿಲ್ಲಾ ಕೋಶಾಧಿಕಾರಿ ಇರ್ಶಾದ್ ಗೂಡಿನಬಳಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಮೀಲಾದ್ ರಾಲಿ ನಿರ್ವಹಣೆಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಚೇರ್ ಮೇನ್ ಆಗಿ ಹಾಫಿಳ್ ಯಾಕೂಬ್ ಸಅದಿ ನಾವೂರು ಜನರಲ್ ಕನ್ವೀನರ್ ಆಗಿ ಅಶ್ರಫ್ ಕಿನಾರ ಮಂಗಳೂರು ಕೋಶಾಧಿಕಾರಿಯಾಗಿ ಅಜ್ಮಲ್ ಕಾವೂರು ಮೀಡಿಯಾ ಕನ್ವೀನರಾಗಿ ಶಾಕಿರ್ ಎಂಎಸ್ಸಿ ಬಜಪೆ ಹಾಗೂ ಸಮಿತಿ ಸದಸ್ಯರನ್ನಾಗಿ ಮುಸ್ಲಿಂ ಜಮಾಅತ್ ಜಿಲ್ಲಾ ಅಧ್ಯಕ್ಷ ಬಿ ಎಂ ಮುಮ್ತಾಜ್ ಅಲಿ, ಪ್ರಧಾನ ಕಾರ್ಯದರ್ಶಿ ರಹೀಂ ಸಅದಿ ಖತರ್,ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷ ವಿ ಯು ಇಸ್ಹಾಕ್ ಝುಹ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೃಷ್ಣಾಪುರ ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು, ಪ್ರಧಾನ ಕಾರ್ಯದರ್ಶಿ ಸುಹೈಲ್ ಫರಂಗಿಪೇಟೆ, ಹಾಗೂ ಬಶೀರ್ ಹಾಜಿ ಮಿತ್ತಬೈಲು, ಬಿ ಎ ಅಬ್ದುಲ್ ಸಲೀಂ ಹಾಜಿ ಅಡ್ಯಾರ್ ಪದವು ಫಾರೂಕ್ ತಲಪಾಡಿ, ಬಶೀರ್ ಸಾಜಿಗಾರ್ ಮುಡಿಪು,
ಬದ್ರುದ್ದೀನ್ ಅಝ್ಹರಿ ಬಡಕಬೈಲು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಅಬ್ದುಲ್ ಜಬ್ಬಾರ್ ಕಣ್ಣೂರು, ಹಸನ್ ಪಾಂಡೇಶ್ವರ,ಇರ್ಶಾದ್ ಹಾಜಿ ಗೂಡಿನಬಳಿ, ನೌಸೀಫ್ ಪಂಜಿಮೊಗರು, ರವೂಫ್ ಹಿಮಮಿಯವರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ