ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಸಮಿತಿಯ ಅಧೀನದಲ್ಲಿ ಅಕ್ಟೋಬರ್ 2 ರಂದು ಮಧ್ಯಾಹ್ನ 2 ಘಂಟೆಗೆ ಮಂಗಳೂರಿನಲ್ಲಿ ವಿಜೃಂಭಣೆಯಿಂದ ಇಲಲ್ ಹಬೀಬ್ ಮೀಲಾದ್ ರ್ಯಾಲಿ ಹಾಗೂ ಪ್ರವಾದಿ ಸಂದೇಶ ಭಾಷಣ ನಡೆಸಲು ಇಂದು ಜಂಇಯ್ಯತುಲ್ ಉಲಮಾ ಕಛೇರಿಯಲ್ಲಿ ನಡೆದ ಸುನ್ನೀ ಸಂಘಟನೆಗಳ ಜಂಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಹಿರಿಯ ವಿದ್ವಾಂಸ ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿ ಅಲ್ ಕಾಮಿಲ್ ಅಧ್ಯಕ್ಷತೆ ವಹಿಸಿದರು. ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು ಉದ್ಘಾಟಿಸಿದರು. ಮುಸ್ಲಿಂ ಜಮಾಅತಿನ ಅಶ್ರಫ್ ಕಿನಾರ, ಖಲೀಲ್ ಮಾಲಿಕಿ ಬೋಳಂತೂರು, ಎಸ್ ವೈ ಎಸ್ ಜಿಲ್ಲಾ ಪ್ರ.ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್, ಎಸ್ ಎಸ್ ಎಫ್ ಜಿಲ್ಲಾ ಪ್ರ.ಕಾರ್ಯದರ್ಶಿ ಸುಹೈಲ್ ಫರಂಗಿಪೇಟೆ, ಮಹಬೂಬ್ ಸಖಾಫಿ ಕಿನ್ಯ, ಮುಂತಾದವರು ಮಾತನಾಡಿದರು.ಎಸ್ ಎಸ್ ಎಫ್ ಜಿಲ್ಲಾ ಕೋಶಾಧಿಕಾರಿ ಇರ್ಶಾದ್ ಗೂಡಿನಬಳಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಮೀಲಾದ್ ರಾಲಿ ನಿರ್ವಹಣೆಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಚೇರ್ ಮೇನ್ ಆಗಿ ಹಾಫಿಳ್ ಯಾಕೂಬ್ ಸಅದಿ ನಾವೂರು ಜನರಲ್ ಕನ್ವೀನರ್ ಆಗಿ ಅಶ್ರಫ್ ಕಿನಾರ ಮಂಗಳೂರು ಕೋಶಾಧಿಕಾರಿಯಾಗಿ ಅಜ್ಮಲ್ ಕಾವೂರು ಮೀಡಿಯಾ ಕನ್ವೀನರಾಗಿ ಶಾಕಿರ್ ಎಂಎಸ್ಸಿ ಬಜಪೆ ಹಾಗೂ ಸಮಿತಿ ಸದಸ್ಯರನ್ನಾಗಿ ಮುಸ್ಲಿಂ ಜಮಾಅತ್ ಜಿಲ್ಲಾ ಅಧ್ಯಕ್ಷ ಬಿ ಎಂ ಮುಮ್ತಾಜ್ ಅಲಿ, ಪ್ರಧಾನ ಕಾರ್ಯದರ್ಶಿ ರಹೀಂ ಸಅದಿ ಖತರ್,ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷ ವಿ ಯು ಇಸ್ಹಾಕ್ ಝುಹ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೃಷ್ಣಾಪುರ ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಮನ್ಸೂರ್ ಹಿಮಮಿ ಮೊಂಟೆಪದವು, ಪ್ರಧಾನ ಕಾರ್ಯದರ್ಶಿ ಸುಹೈಲ್ ಫರಂಗಿಪೇಟೆ, ಹಾಗೂ ಬಶೀರ್ ಹಾಜಿ ಮಿತ್ತಬೈಲು, ಬಿ ಎ ಅಬ್ದುಲ್ ಸಲೀಂ ಹಾಜಿ ಅಡ್ಯಾರ್ ಪದವು ಫಾರೂಕ್ ತಲಪಾಡಿ, ಬಶೀರ್ ಸಾಜಿಗಾರ್ ಮುಡಿಪು,
ಬದ್ರುದ್ದೀನ್ ಅಝ್ಹರಿ ಬಡಕಬೈಲು, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಅಬ್ದುಲ್ ಜಬ್ಬಾರ್ ಕಣ್ಣೂರು, ಹಸನ್ ಪಾಂಡೇಶ್ವರ,ಇರ್ಶಾದ್ ಹಾಜಿ ಗೂಡಿನಬಳಿ, ನೌಸೀಫ್ ಪಂಜಿಮೊಗರು, ರವೂಫ್ ಹಿಮಮಿಯವರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ