ವಿಟ್ಲ: ದಾರುನ್ನಜಾತ್ ಎಜುಕೇಶನಲ್ ಸೆಂಟರ್ ಟಿಪ್ಪುನಗರ ಕೊಡಂಗಾಯಿ ವಿದ್ಯಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಮರ್ಹೂಂ ಶೈಖುನಾ ಅಬೂಬಕ್ಕರ್ ಉಸ್ತಾದ್ ಆಂಡ್ ನೇರ್ಚೆ ದಿನಾಂಕ ಸೆಪ್ಟಂಬರ್ 17 ರಂದು ಆದಿತ್ಯವಾರ ಸಂಸ್ಥೆಯಲ್ಲಿ ವಿವಿಧ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜರಗಲಿದೆ.
ಬೆಳಿಗ್ಗೆ 9.30 ಕೆ ಸರಿಯಾಗಿ ಸಂಸ್ಥೆಯ ಅಧ್ಯಕ್ಷರಾದ ಮಹಮೂದುಲ್ ಫೈಝಿ ( ವಾಲೆಮುಂಡೋವ್ ಉಸ್ತಾದ್) ಧ್ವಜಾರೋಹಣ ನಡೆಸಲಿದ್ದು 10 ಗಂಟೆಗೆ ಸಯ್ಯದ್ ಶಮೀಮ್ ತಂಙಳ್ ಶೈಖುನಾ ಅಬೂಬಕ್ಕರ್ ಉಸ್ತಾದ್ ಅವರ ಮಕ್ ಬರ ಝಿಯಾರತ್ ಗೆ ನೇತೃತ್ವ ನೀಡಲಿದ್ದಾರೆ .10:30 ಕ್ಕೆ ಬುರ್ದಾ ಮಜ್ಲಿಸ್ ನಡೆಯಲಿದ್ದು 11 ಗಂಟೆಗೆ ಖತಮುಲ್ ಕುರ್ ಆನ್ ನಡೆಯಲಿದೆ.12 ಗಂಟೆಗೆ ಕಂಪ್ಯೂಟರ್ ಕೋರ್ಸ್ ಕಲಿತ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ನಡೆಯಲಿದೆ.
12:15 ಕೆ ಅನುಸ್ಮರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಸಯ್ಯದ್ ಮುಕ್ತಾರ್ ತಂಙಳ್ ಕುಂಬೋಳ್, ಇಬ್ರಾಹೀಂ ಫೈಝಿ ಕನ್ಯಾನ ಉಸ್ತಾದ್,Dr. U.T ಇಫ್ತಿಕಾರ್, ಉಳ್ಳಾಲ ದರ್ಗಾ ಅಧ್ಯಕ್ಷರಾದ ಹನೀಫ್ ಹಾಜಿ,ಮುಹಮ್ಮದಲಿ ಸಖಾಫಿ ಅಶ್ ಅರಿಯ,ಉಸ್ಮಾನ್ ಸಖಾಫಿ,ಖಾದರ್ ಫೈಝಿ ಹಾಗೂ ಹಲವು ಉಲಮಾ ಉಮಾರಾಗಳು ಮತ್ತು ರಾಜಕೀಯ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ನೀಡಲಾಗುವುದು.ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ , ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ