ಗೆಳೆಯರ ಬಳಗ ನಾರ್ಶ, ಬಾರೆಬೆಟ್ಟು ಇದರ ವತಿಯಿಂದ ಶ್ರೀ ಬಿ. ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಉಳ್ಳಾಲ- ಮಂಗಳೂರು ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ( DBCS) ರಿ. ಮಂಗಳೂರು ಇದರ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರವು ದಿನಾಂಕ :- 17-9-2023 ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಉದ್ಘಾಟಿಸಲಿದ್ದಾರೆ. ಹಾಗೂ ಇನ್ನಿತರ ರಾಜಕೀಯ, ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ. ಈ ರಕ್ತದಾನ ಶಿಬಿರದಲ್ಲಿ ಕ್ರಿಕೇಟ್ ತಂಡದ 10 ಜನ ರಕ್ತದಾನ ಮಾಡಿದರೆ ಭಾಗವಹಿಸಿದ ಎಲ್ಲಾ ತಂಡಕ್ಕೆ ಉಚಿತವಾಗಿ 1 ಬ್ಯಾಟ್ ಮತ್ತು ಬಾಲ್ ನ್ನು ನೀಡಲಾಗುವುದು.
ಅಲ್ಲದೇ ಕಣ್ಣು ತಪಾಸಣೆ ಮಾಡಿ ಕನ್ನಡಕದ ಅವಶ್ಯಕತೆಯಿರುವ ಶಿಬಿರಾರ್ಥಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು ಮತ್ತು ಕಣ್ಣಿನ ಸರ್ಜರಿ ಮಾಡಬೇಕಾಗಿರುವ ಶಿಬಿರಾರ್ಥಿಗೆ ಉಚಿತವಾಗಿ ಕಣ್ಣಿನ ಸರ್ಜರಿಯನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಉಳ್ಳಾಲ- ಮಂಗಳೂರು ಇಲ್ಲಿ ಮಾಡಿಕೊಡಲಾಗುವುದು. ಮತ್ತು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ ವಿವಿಧ ರೀತಿಯ ಖಾಯಿಲೆಗೆ ತುತ್ತಾಗಿರುವ ಎಲ್ಲಾ ಶಿಬಿರಾರ್ಥಿಗಳಿಗೆ ಆಯಾ ಖಾಯಿಲೆಗೆ ಅನುಗುಣವಾಗಿ ಉಚಿತವಾಗಿ ಔಷಧಿಯನ್ನು ನೀಡಲಾಗುವುದು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್