ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಮೂವತ್ತನೇ ವರ್ಷಾಚರಣೆ ಯ ಮಹಾ ಸಮ್ಮೇಳನವು 2024ಜನವರಿ 24ರಂದು ಮಂಗಳೂರಿನಲ್ಲಿ ನಡೆಯಲಿದ್ದು ಅದರ ಪ್ರಚಾರಾರ್ಥ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಾಜ್ಯ ನಾಯಕರ ಪ್ರವಾಸ ನಡೆಯಲಿದೆ.
ದ. ಕ ಜಿಲ್ಲೆ ವೆಸ್ಟ್ ವಿಭಾಗದಲ್ಲಿ ನಾಳೆ ಸೆ.24ರಂದು ಪ್ರವಾಸ ಕೈಗೊಳ್ಳಲಾಗಿದ್ದು, ದ. ಕ ಜಿಲ್ಲೆಯ ಮಂಗಳೂರು ಝೋನ್, ಸುರತ್ಕಲ್ ಝೋನ್, ಹಾಗೂ ಮೂಡಬಿದಿರೆ ಝೋನ್ ಗಳ ಕಾರ್ಯ ಕ್ರಮವು ಕೈಕಂಬ ಮೆಗಾ ಪ್ಲಾಝಾದಲ್ಲಿ ಸಾಯಂಕಾಲ 4ಗಂಟೆಗೆ ಜೂಬಿಲಿ ಜರ್ನಿ ನಡೆಯಲಿದೆ.
ಉಳ್ಳಾಲ, ದೇರಳಕಟ್ಟೆ, ಮುಡಿಪು, ಹಾಗೂ ಬಂಟ್ವಾಳ ಝೋನ್ ವಿಭಾಗದ ಜೂಬಿಲಿ ಜರ್ನಿ ಕಾರ್ಯ ಕ್ರಮವು ದೇರಳಕಟ್ಟೆ ತಾಜುಲ್ ಉಲಮಾ ವುಮೆನ್ಸ್ ಕಾಲೇಜಿನಲ್ಲಿ ರಾತ್ರಿ 7 ಗಂಟೆಗೆ ನಡೆಯಲಿದ್ದು ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕೊಡಗು, ಪ್ರಧಾನ ಕಾರ್ಯದರ್ಶಿ ಎಂ ಬಿ ಎಂ ಸಾದಿಕ್ ಮಾಸ್ಟರ್ ನೇತೃತ್ವದ ತಂಡವು ಭಾಗವಹಿಸಲಿದ್ದಾರೆ ಎಂದು ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪ್ರಿಂಟೆಕ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ