ಮದೀನಾ ಮುನವ್ವರ: ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಸೇವೆ ಸಲ್ಲಿಸುತ್ತಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಮದೀನಾ ಮುನವ್ವರ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಸಂಸ್ಥೆಯ ಕಾರ್ಯಾಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಮದನಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮದೀನಾ ಮುನವ್ವರ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಜನಾಬ್ ಅಬ್ದುಲ್ ಹಮೀದ್ ಮಾರ್ನಾಡ್, ಪ್ರಧಾನ ಕಾರ್ಯದರ್ಶಿಯಾಗಿ ಹುಸೈನ್ ಉರ್ವಾಲುಪದವು ಹಾಗೂ ಕೋಶಾಧಿಕಾರಿಯಾಗಿ ತಾಜುದ್ದೀನ್ ಸುಳ್ಯ ರವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ಅಬೂಬಕ್ಕರ್ ಮುಸ್ಲಿಯಾರ್ ಉದ್ದಬೆಟ್ಟು, ಅಶ್ರಫ್ ಹಾಜಿ ಕಿನ್ಯ ಕಾರ್ಯದರ್ಶಿಗಳಾಗಿ ಅಬ್ದುಸ್ಸಲಾಂ ಆತೂರು, ಅಶ್ರಫ್ ದೇರಳಕಟ್ಟೆ ಹಾಗೂ ಇನ್ನಿತರ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.