ಮಾಣಿ : ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ(ಸ.ಅ) ರವರ ಜನ್ಮದಿನಾಚರಣೆ ಪ್ರಯುಕ್ತ ಮೀಲಾದುನ್ನಬಿ ಆಚರಿಸಲಾಯಿತು.ಎರಡು ದಿನಗಳ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು,ಮತ ಪ್ರಭಾಷಣ,ಬುರ್ದಾ ಮಜ್ಲಿಸ್,ಮೌಲಿದ್ ಮತ್ತು ಆಕರ್ಷಕ ಮೀಲಾದ್ ರ್ಯಾಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ ಹನೀಫ್ ಸಅದಿ ಕುಂತೂರು,ಸದರ್ ಇಬ್ರಾಹಿಂ ರಝಾ ಅಲ್ ಫುರ್ಖಾನಿ ವಿಟ್ಲ,ಅಧ್ಯಾಪಕರಾದ ನವಾಝ್ ಹನೀಫಿ ಅಲ್ ಅಶ್ಹರಿ ನೂಜಿ,ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಸೂರಿಕುಮೇರು,ಕಾರ್ಯದರ್ಶಿ ಅಮೀರುದ್ದೀನ್,ಕೋಶಾಧಿಕಾರಿ ಯೂಸುಫ್ ಹಾಜಿ,ಉಪಾಧ್ಯಕ್ಷ ಹಂಝ ಸೂರಿಕುಮೇರು, ಜೊತೆ ಕಾರ್ಯದರ್ಶಿ ಅಬ್ದುಲ್ ಕರೀಂ ಸೂರಿಕುಮೇರು, ಸಹಿತ ಹಲವಾರು ಉಲಮಾ ಉಮರಾ ನೇತಾರರು,ಜಮಾಅತ್ ಕಮಿಟಿಯ ಸದಸ್ಯರು,ಬದ್ರಿಯಾ ಯಂಗ್ಮೆನ್ಸ್ ,ಫ್ರೆಂಡ್ಸ್ ,ಯುವಕರ ಸಹಿತ ಸೂರಿಕುಮೇರು, ಜಮಾಅತಿಗೊಳಪಟ್ಟ ಎಲ್ಲರೂ, ಭಾಗವಹಿಸಿದರು.
ಮೌಲಿದ್ ಕಾರ್ಯಕ್ರಮದಲ್ಲಿ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಮಾತನಾಡಿ ಇಂದು ಲೋಕವೇ ಸಂಭ್ರಮಿಸುವ ದಿವಸ,ಮುಹ್ಮಿನ್ಗಳಿಗೆ ಇಂದು ಹಬ್ಬವಾಗಿದೆ,ಎಂದು ಹೇಳುತ್ತಾ ಜನರೇ ಮರಣ ಬೆನ್ನ ಹಿಂದೆ ಇದೆ ಅಹಂಕಾರಿಗಳಾಗಿ ಜೀವಿಸಬೇಡಿ,ಒಂದು ಜ್ವರವೋ ಬೇಧಿಯೋ ಬಂದರೆ ಎದ್ದು ನಿಲ್ಲಲು ಇನ್ನೊಬ್ಬರ ಸಹಾಯ ನಮಗೆ ಬೇಕು ಎಂಬುವುದನ್ನು ಮರೆಯದಿರಿ ಎಂದು ಉಪದೇಶಿಸಿ ದುಆ ಗೈದರು,ಮೀಲಾದ್ ರ್ಯಾಲಿಗೆ ಸೂರಿಕುಮೇರು ಜಂಕ್ಷನ್ ಬಳಿ ಹಿಂದೂ ಸಹೋದರರು ಕೂಡಾ ತಂಪು ಪಾನೀಯಗಳನ್ನು ನೀಡಿ ಶುಭಹಾರೈಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ