janadhvani

Kannada Online News Paper

KCF ಒಮಾನ್- ನಾಳೆ ಬೃಹತ್ ಮೀಲಾದ್ ಕಾನ್ಫರೆನ್ಸ್

ಸೆ.29 ಶುಕ್ರವಾರ ಅಲ್ ಫವಾನ್ ಬಾಲ್ರೂಮ್, ಝಾಕಿರ್ ಮಾಲ್ ಅಲ್ ಖುವೈರ್ ನಲ್ಲಿ ನಡೆಯಲಿದೆ.

ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಒಮಾನ್ ವತಿಯಿಂದ ಜಗತ್ತಿಗೆ ಕರುಣೆಯ ಪ್ರವಾದಿ ಎಂಬ ಧ್ಯೇಯ ವಾಕ್ಯದೊಂದಿಗೆ ಬೃಹತ್ ಮೀಲಾದ್ ಸಮಾವೇಶವು ಸೆ.29 ಶುಕ್ರವಾರ ಅಲ್ ಫವಾನ್ ಬಾಲ್ರೂಮ್, ಝಾಕಿರ್ ಮಾಲ್ ಅಲ್ ಖುವೈರ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮವು ಸಂಜೆ 4 ಕ್ಕೆ ಪ್ರಾರಂಭವಾಗಲಿದ್ದು , ಮಕ್ಕಳ ಮೀಲಾದ್ ಸಾಂಸೃತಿಕ ಕಲರವ ನಡೆಯಲಿದೆ. ಸಮಯ ಸಂಜೆ 7 ರಿಂದ 8 ರವರೆಗೆ ಮೌಲಿದ್ ಹಾಗೂ ಬುರ್ಧಾ ಮಜ್ಲಿಸ್ ನಡೆಯಲಿದೆ.

ರಾತ್ರಿ 8 ಕ್ಕೆ ಸಭಾಕಾರ್ಯಕ್ರಮ ನಡೆಯಲಿದ್ದು, ಜನಾಬ್ ಅಯ್ಯೂಬ್ ಕೋಡಿಯವರು ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಯ್ಯಿದ್ ಆಬಿದ್ ಅಲ್ ಐದರೂಸಿ ತಂಗಳ್ ರವರು ದುಆಕ್ಕೆ ನೇತೃತ್ವ ನೀಡಲಿದ್ದಾರೆ.

ಉಮರ್ ಸಖಾಫಿ ಎಡಪ್ಪಾಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,
ಕಾರ್ಯಕ್ರಮದಲ್ಲಿ ಜುನೈದ್ ಹಿಮಮಿ ಸಖಾಫಿ – ಇಹ್ಸಾನ್ ದಾಈ ಚಿತ್ರದುರ್ಗ ಇವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಹಾಗೂ ನಅ್’ತೇ ಶರೀಫ್ ಮೂಲಕ ಪ್ರಖ್ಯಾತಿ ಪಡೆದ ಮುಈನ್ ಖಾದ್ರಿ ಬೆಂಗಳೂರು ಇವರಿಂದ ನಅ್’ತೆ ಶರೀಫ್ ಕಾರ್ಯಕ್ರಮ ನಡೆಯಲಿದೆ. ಸ್ವಾದಿಕ್ ಹಾಜಿ ಸುಳ್ಯ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿರುವರು.

ಕಾರ್ಯಕ್ರಮದಲ್ಲಿ ಜನಾಬ್ ಆರಿಫ್ ಕೋಡಿ, ಇಕ್ಬಾಲ್ ಬೊಳ್ಮಾರ್ ಬರ್ಕ, ಇಬ್ರಾಹೀಂ ಹಾಜಿ ಅತ್ರಾಡಿ, ಉಬೈದುಲ್ಲಾ ಸಖಾಫಿ, ಹಂಝ ಹಾಜಿ ಕನ್ನಂಗಾರ್, ಜನಾಬ್ ಆಬಿದ್ ಪಾಷ, ಮೋನಬ್ಪ ಹಾಜಿ, ಹನೀಫ್ ಮನ್ನಾಪು, ಅಬ್ದಲ್ಲತೀಫ್ ಮಂಜೇಶ್ವರ ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿರುವರು. ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com