ಮಂಗಳೂರು: ಇತ್ತೀಚೆಗೆ ಬಿಜೆಪಿ ನಾಯಕ ಬಸವನ ಗೌಡ ಪಾಟೀಲ್ ಯತ್ನಾಳ್ ಹಾವೇರಿಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ತುಂಬಾ ಭಾವನಾತ್ಮಕವಾಗಿ ಹೇಳಿಕೆ ನೀಡಿ ರಾಜ್ಯಕ್ಕೆ ಬುಲ್ಡೋಜರ್ ಬರಲಿದೆ ಆ ಸ್ಥಾನವನ್ನು ನಾನೇ ಅಲಂಕರಿಸಲಿದ್ದೇನೆ ಎಂದಿರುವುದಕ್ಕೆ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ ಈ ಮಾತಿನೊಂದಿಗೆ ಈ ದೇಶದ, ಒಂದು ನಿರ್ಧಿಷ್ಟ ಜನ ಸಮುದಾಯವನ್ನು ಉದ್ದೇಶಿಸಿ ಮಾರ್ಮಿಕ ಮಾತುಗಳನ್ನು ಆಡಿದ್ದಾರೆ. ಈ ದೇಶದಲ್ಲಿ ಹುಟ್ಟಿ ಬೆಳದು ಈ ದೇಶದ ಮಣ್ಣಿಗೆ ಅಘಾದ ಕೊಡುಗೆ ನೀಡಿದ, ಒಂದು ಪರಿಗಣನಾತ್ಮಕ ಸಮುದಾಯವನ್ನು ತುಚ್ಛವಾಗಿ ಸಂಬೋಧಿಸಿದ್ದಾರೆ.
ಯತ್ನಾಳ್ ರಂತೆಯೇ ಇದಕ್ಕಿಂದ ಮೊದಲು ಅದೇ ಧಾಟಿಯಲ್ಲಿ ಮಾತನಾಡಿದ, ಸಂವಿಧಾನವನ್ನು ಬದಲಾಯಿಸುತ್ತೇವೆ, ಮತ್ತು ಒಂದು ನಿರ್ಧಿಷ್ಟ ಜನಸಮುದಾಯ ಮತ್ತು ಧರ್ಮವನ್ನು ಅವಹೇಳನ ಮಾಡಿದ ಯತ್ನಾಳ್ ರವರ ಸಮಕಾಲೀನ, ಕರ್ನಾಟಕದ ಉತ್ತರ ಕರಾವಳಿಯ ನಾಯಕರೊಬ್ಬರು ಇದೀಗ ಅನಿವಾರ್ಯ ಆಂಬುಲೆನ್ಸ್ ಸೇವೆಯನ್ನು ಅವಲಂಬಿಸಿರುವುದು ಖೇದಕರ.
ಅನ್ಯಧರ್ಮೀಯ ಮಹಿಳೆಯರ ಹಣೆಗೆ ತಿಲಕ ಇಡಲಿದ್ದೀವೆ,ಕರ್ನಾಟಕದ ಒಂದು ನಿರ್ಧಿಷ್ಟ ಧರ್ಮೀಯರ ಪ್ರತಿ ಮನೆಯಲ್ಲಿಯೂ ಮಹಿಳೆಯರ ಬುರ್ಕಾ ವಸ್ತ್ರ ಇರದಂತೆ ಮಾಡುತ್ತೇವೆ ಎಂದು ಬೊಬ್ಬಿರಿಸಿದ ಮಾತುಗಾರರ ಇತ್ತೀಚೆಗಿನ ಸ್ಥಿತಿ ಏನು ಎಂದು ಯತ್ನಾಳ್ ಅವರು ನೆನಪಿಡುವುದು ಉತ್ತಮ ಎಂದು ಕೆ.ಅಶ್ರಫ್( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ