ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಅಬುಧಾಬಿ ವತಿಯಿಂದ ‘ಜಗತ್ತಿಗೆ ಕರುಣೆಯ ಪ್ರವಾದಿ’ ಎಂಬ ಶೀರ್ಷಿಕೆಯಡಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಇಲ್ಲಿನ ಅಬುಧಾಬಿ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ಸೆ.೨೯ ರಂದು ನಡೆಯಿತು.

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಣ್ಣೂರು ಅಲ್ ಮಖರ್ ವಿಧ್ಯಾ ಸಮುಚ್ಚಯಗಳ ಜನರಲ್ ಮ್ಯಾನೇಜರ್ ಸಯ್ಯಿದ್ ಸುಹೈಲ್ ಸಖಾಫ್ ಮಾತನಾಡಿ “ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ ಕರ್ನಾಟಕದ ವಿವಿಧ ಭಾಗಗಳಲ್ಲಿ ಕೆಸಿಎಫ್ ಇಹ್ಸಾನ್ ಸಂಸ್ಥೆಯ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ನಡೆಸುತ್ತಿರುವುದು ಶ್ಲಾಘನೀಯ, ಈಗಾಗಲೇ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಶಿಕ್ಷಣ ಸಮುಚ್ಚಯಗಳನ್ನು ಸ್ಥಾಪಿಸಿ ಉತ್ತಮ ಶಿಕ್ಷಣ ನೀಡುತ್ತಿದ್ದು ಮುಂಬರುವ ದಿನಗಳಲ್ಲಿ ಸಂಸ್ಥೆಯ ಕಾರ್ಯಾಚರಣೆಯ ವ್ಯಾಪ್ತಿ ವಿಶಾಲಗೊಳ್ಳಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕೆದುಂಬಾಡಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸಮಾರಂಭದಲ್ಲಿ ಕೆಸಿಎಫ್ ಅಬುಧಾಬಿ ಪ್ರಕಾಶಿತ ‘ಉಮ್ರಾ ಆಂಡ್ ಝಿಯಾರತ್ ಆನ್ ಎಸೆನ್ಶಲ್ ಹ್ಯಾಂಡ್ ಬುಕ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಇಂಡಿಯನ್ ಸ್ಕೂಲ್ ಕಾರ್ಯದರ್ಶಿ ಸಿ.ಎ ಅಬ್ದುಲ್ಲಾ, ಐಸಿಎಫ್ ಸಂಘಟನಾ ನಾಯಕರಾದ ಪರಪ್ಪ ಅಬ್ದುಲ್ ಹಮೀದ್ ಸಾಹೇಬ್, ಹಂಝ ಅಹ್ಸನಿ, ಕೆಸಿಎಫ್ ಅಂತರಾಷ್ಟಿçÃಯ ಸಮಿತಿ ಸದಸ್ಯ ಪಿಎಂಹೆಚ್ ಅಬ್ದುಲ್ ಹಮೀದ್ ಈಶ್ವರಮಂಗಳ, ಸ್ವಾಗತ ಸಮಿತಿ ಅಧ್ಯಕ್ಷ ಹಕೀಂ ತುರ್ಕಳಿಕೆ, ಕನ್ವೀನರ್ ಉಮರ್ ಈಶ್ವರಮಂಗಳ, ಕೋಶಾಧಿಕಾರಿ ನಿಝಾರ್ ಕುಂಬ್ಳೆ, ಉಧ್ಯಮಿ ಮುಹಮ್ಮದ್ ಅಲಿ ವಳವೂರು, ಪೂಕೋಯ ಮಿಸ್ಬಾಹಿ ತಂಙಳ್ ಮಂಬಾಡ್, ದಾರುಲ್ ಹುದಾ ತಂಬಿನಮಕ್ಕಿ ಸಂಸ್ಥೆಯ ಮ್ಯಾನೇಜರ್ ಖಲೀಲ್ ಹಿಮಮಿ, ಸೇರಿದಂತೆ ಐಸಿಎಫ್ ಹಾಗೂ ಆರ್.ಎಸ್.ಸಿ ಸಂಘಟನಾ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕೆಸಿಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ ಸ್ವಾಗತಿಸಿದರು. ಝೋನ್ ಕಾರ್ಯದರ್ಶಿ ಕಬೀರ್ ಬಾಯಂಬಾಡಿ ವಂದಿಸಿದರು
ವರದಿ: ಸಫ್ವಾನ್ ತುರ್ಕಳಿಕೆ
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ