ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವನ್ನು ಹೈಜಾಕ್ ಮಾಡುವುದಾಗಿ ಇ- ಮೇಲ್ ಮೂಲಕ ಬೆದರಿಕೆ ಹಾಕಿದ ಕಾರಣ ವಿಮಾನ ಪ್ರಯಾಣವನ್ನು ರದ್ದುಗೊಳಿಸಿದ ಪ್ರಕರಣವು ನಿನ್ನೆ ವರದಿಯಾಗಿದೆ.
ವಿಮಾನ ನಿಲ್ದಾಣದ ವ್ಯವಸ್ಥಾಪಕರಿಗೆ, ಭಾನುವಾರ ಸಂಜೆ ‘ದುಬೈಗೆ ಹೊರಟಿರುವ ವಿಮಾನದಲ್ಲಿ ಐಎಸ್ಐ ಉಗ್ರರಿಗೆ ಮಾಹಿತಿ ನೀಡುವ ವ್ಯಕ್ತಿಯಿದ್ದಾನೆ, ಆತ ವಿಮಾನವನ್ನು ಹೈಜಾಕ್ ಮಾಡಲಿದ್ದಾನೆ, ಅಲ್ಲದೆ ಆತ ವಿಮಾನ ನಿಲ್ದಾಣದಿಂದಲೇ ಕೆಲವು ಜನರ ಸಹಾಯವನ್ನು ಪಡೆದಿದ್ದಾನೆ’ ಎಂದು ಸುಳ್ಳು ಬೆದರಿಕೆ ಇ- ಮೇಲ್ ಕಳುಹಿಸಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಕಮಿಷನರ್, ಇದೊಂದು ನಕಲಿ ಇ-ಮೇಲ್ ಬೆದರಿಕೆ ಎಂದು ಪತ್ತೆ ಮಾಡಿದ್ದು, ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಕರೆಯಿಂದ ವಿಮಾನ ರದ್ದುಪಡಿಸಿ ಪ್ರಯಾಣಕರಿಗೆ ಪ್ರತ್ಯೇಕ ವಿಮಾನದ ವ್ಯವಸ್ಥೆ ಮಾಡಲಾಗಿದೆ.
ಅನುಮಾನ ಬಂದ ಹಿನ್ನೆಲೆಯಲ್ಲಿ ತಿರುಪತಿ ಬಾದಿನೇನಿ, ಎಲ್ ವಿನೋದ್ ಕುಮಾರ್ ಮತ್ತು ಆರ್ ರಾಕೇಶ್ ಕುಮಾರ್ ಅವರನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. ಇದಲ್ಲದೆ, ತಿರುಪತಿ ಬಾದಿನೇನಿ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯನ್ನು ಸಹ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ