ರಿಯಾದ್: ಇಸ್ರೇಲ್-ಹಮಾಸ್ ಕದನ ತೀವ್ರಗೊಂಡಿದ್ದು, ಪ್ರದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಅರಬ್ ದೇಶಗಳು ತೀವ್ರ ಶ್ರಮ ಮುಂದುವರಿಸಿದೆ.
ಇಸ್ರೇಲ್ ಮೇಲೆ ಹಮಾಸ್ ಹೋರಾಟಗಾರರು ನಡೆಸಿರುವ ದಾಳಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್, ತಮ್ಮ ದೇಶವು ಫೆಲೆಸ್ತೀನಿ ಜನರೊಂದಿಗೆ ನಿಲ್ಲುವುದಾಗಿ ಹೇಳಿದ್ದಾರೆ. ಅದೇ ಸಮಯ ಈ ಸಂಘರ್ಷ ಇನ್ನಷ್ಟು ವ್ಯಾಪಿಸದಂತೆ ತಾವು ಶ್ರಮಿಸುತ್ತಿರುವುದಾಗಿ ಅವರು ಫೆಲೆಸ್ತೀನಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ಹೇಳಿದ್ದಾಗಿ ತಿಳಿಸಿದ್ದಾರೆ.
ಉತ್ತಮ ಜೀವನ ನಡೆಸುವ ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಹಾಗೂ ಶಾಂತಿಗಾಗಿ ಫೆಲೆಸ್ತೀನಿ ಜನರ ಕಾನೂನುಬದ್ಧ ಹಕ್ಕುಗಳಿಗಾಗಿ ಅವರ ಜೊತೆಗೆ ಸೌದಿ ಅರೇಬಿಯಾ ನಿಲ್ಲುವುದಾಗಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಹೇಳಿದರು. ಇದರೊಂದಿಗೆ, ಸೌದಿ ಅರೇಬಿಯಾ ಇಸ್ರೇಲ್ಗೆ ಬೆಂಬಲ ಘೋಷಿಸಿದೆ ಎಂಬ ಸುಳ್ಳು ಸುದ್ದಿಯನ್ನು ಬಿತ್ತರಿಸಿದ ಮಾಧ್ಯಮಗಳು ಮುಖಭಂಗಕ್ಕೀಡಾಗಿದೆ.
ಫೆಲೆಸ್ತೀನಿ ವಿಚಾರವು ಸೌದಿ ಅರೇಬಿಯಾಗೆ ಬಹಳ ಮುಖ್ಯವಾಗಿದೆ ಎಂದು ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮಾತನಾಡಿದ ಮುಹಮ್ಮದ್ ಬಿನ್ ಸಲ್ಮಾನ್,ಹೇಳಿದ್ದರು. “ಆ ಸಮಸ್ಯೆ ಪರಿಹರಿಸಬೇಕಿದೆ, ಫೆಲೆಸ್ತೀನಿ ಜನರ ಜೀವನ ಸುಲಭಗೊಳಿಸಬೇಕಿದೆ,” ಎಂದು ಅವರು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ