ರಿಯಾದ್: ಇಸ್ರೇಲ್-ಹಮಾಸ್ ಕದನ ತೀವ್ರಗೊಂಡಿದ್ದು, ಪ್ರದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಅರಬ್ ದೇಶಗಳು ತೀವ್ರ ಶ್ರಮ ಮುಂದುವರಿಸಿದೆ.
ಇಸ್ರೇಲ್ ಮೇಲೆ ಹಮಾಸ್ ಹೋರಾಟಗಾರರು ನಡೆಸಿರುವ ದಾಳಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್, ತಮ್ಮ ದೇಶವು ಫೆಲೆಸ್ತೀನಿ ಜನರೊಂದಿಗೆ ನಿಲ್ಲುವುದಾಗಿ ಹೇಳಿದ್ದಾರೆ. ಅದೇ ಸಮಯ ಈ ಸಂಘರ್ಷ ಇನ್ನಷ್ಟು ವ್ಯಾಪಿಸದಂತೆ ತಾವು ಶ್ರಮಿಸುತ್ತಿರುವುದಾಗಿ ಅವರು ಫೆಲೆಸ್ತೀನಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ಹೇಳಿದ್ದಾಗಿ ತಿಳಿಸಿದ್ದಾರೆ.
ಉತ್ತಮ ಜೀವನ ನಡೆಸುವ ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಹಾಗೂ ಶಾಂತಿಗಾಗಿ ಫೆಲೆಸ್ತೀನಿ ಜನರ ಕಾನೂನುಬದ್ಧ ಹಕ್ಕುಗಳಿಗಾಗಿ ಅವರ ಜೊತೆಗೆ ಸೌದಿ ಅರೇಬಿಯಾ ನಿಲ್ಲುವುದಾಗಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಹೇಳಿದರು. ಇದರೊಂದಿಗೆ, ಸೌದಿ ಅರೇಬಿಯಾ ಇಸ್ರೇಲ್ಗೆ ಬೆಂಬಲ ಘೋಷಿಸಿದೆ ಎಂಬ ಸುಳ್ಳು ಸುದ್ದಿಯನ್ನು ಬಿತ್ತರಿಸಿದ ಮಾಧ್ಯಮಗಳು ಮುಖಭಂಗಕ್ಕೀಡಾಗಿದೆ.
ಫೆಲೆಸ್ತೀನಿ ವಿಚಾರವು ಸೌದಿ ಅರೇಬಿಯಾಗೆ ಬಹಳ ಮುಖ್ಯವಾಗಿದೆ ಎಂದು ಕಳೆದ ತಿಂಗಳು ಸಂದರ್ಶನವೊಂದರಲ್ಲಿ ಮಾತನಾಡಿದ ಮುಹಮ್ಮದ್ ಬಿನ್ ಸಲ್ಮಾನ್,ಹೇಳಿದ್ದರು. “ಆ ಸಮಸ್ಯೆ ಪರಿಹರಿಸಬೇಕಿದೆ, ಫೆಲೆಸ್ತೀನಿ ಜನರ ಜೀವನ ಸುಲಭಗೊಳಿಸಬೇಕಿದೆ,” ಎಂದು ಅವರು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ