ಖಮೀಸ್ ಮುಷೈತ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರಿನ ನಯಾಝ್ ಭಾಯಿ ಎಂಬವರು ಪಾಸ್ಪೋರ್ಟ್ ನವೀಕರಣೆಗಾಗಿ ನೀಡಿರುವುದರಿಂದ ಊರಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೆಸಿಎಫ್ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸಕಾಲಕ್ಕೆ ಊರಿಗೆ ತೆರಳಲು ಸಾಧ್ಯವಾಯಿತು.
ಸೌದಿ ಅರೇಬಿಯಾದ ಖಮೀಸ್ ಮುಷೈತ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ನಯಾಝ್ ಭಾಯಿ ಅವರು ಹಠಾತ್ ಆಗಿ ಗಂಭೀರ ರೋಗಕ್ಕೆ ತುತ್ತಾಗಿದ್ದರು. ರೋಗದ ಗಾಂಭೀರ್ಯತೆ ಕಾರಣ ಸರ್ಕಾರೀ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿ, ಖಾಸಗೀ ಆಸ್ಪತ್ರೆಗೆ ದಾಖಲಿಸುವಂತೆ ಕೇಳಿದೆ.
ಆದರೆ, ಅವರ ಕೈಯಲ್ಲಿ ಇನ್ಶೂರೆನ್ಸ್ ಇಲ್ಲದ ಕಾರಣ ಬಲು ದೊಡ್ಡ ಆಸ್ಪತ್ರೆ ಶುಲ್ಕವನ್ನು ಪಾವತಿಸುವುದು ಕಷ್ಟಕರವಾದ ಸಂಗತಿ. ಖಾಸಗೀ ಆಸ್ಪತ್ರೆಯ ವೈದ್ಯರು ಮೂರು ದಿನದೊಳಗೆ ಇವರನ್ನು ಊರಿಗೆ ಕಳಿಸಿಕೊಡಿ ಇಲ್ಲದಿದ್ದರೆ ಇಲ್ಲೇ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಸಬೇಕು ಎಂದಿದ್ದು, ವಿಳಂಬವಾದರೆ ಜೀವಕ್ಕೆ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಊರಿಗೆ ಕಳಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕಾರ್ಯಕರ್ತರು ಶ್ರಮಿಸುತ್ತಿರುವ ಮಧ್ಯೆ ಅವರ ಪಾಸ್ಪೋರ್ಟ್ ನ್ನು ನವೀಕರಣೆಗೆ ನೀಡಿರುವ ವಿವರ ಲಭಿಸಿದೆ. ಕೂಡಲೇ ಭಾರತೀಯ ಕಾನ್ಸುಲೇಟ್ ನ್ನು ಸಂಪರ್ಕಿಸಿದ ಕೆಸಿಎಫ್ ಕಾರ್ಯಕರ್ತರು, ಶೀಘ್ರ ಪಾಸ್ಪೋರ್ಟ್ ಲಭಿಸುವಂತೆ ಮನವಿ ಮಾಡಿದ್ದಾರೆ.
ಏತನ್ಮಧ್ಯೆ, ಎಕ್ಸಿಟ್ ಪಾಸ್ಪೋರ್ಟ್ ಪಡೆದು ಊರಿಗೆ ಕಳಿಸುವ ಬಗ್ಗೆಯೂ ಆಲೋಚಿಸಿದ್ದು, ಅದರಿಂದ ಮತ್ತೆ ಸೌದಿಗೆ ಬರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ನವೀಕರಣೆಗಾಗಿ ನೀಡಿದ ಪಾಸ್ಪೋರ್ಟ್ ನ್ನೇ ಪಡೆಯಲು ಕೆಸಿಎಫ್ ಕಾರ್ಯಕರ್ತರು ತೀವ್ರ ಶ್ರಮ ಮುಂದುವರಿಸಿ, ಕೇವಲ 24 ಗಂಟೆಯಲ್ಲೇ ಪಾಸ್ಪೋರ್ಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕೂಡಲೇ ನಯಾಝ್ ಭಾಯಿ ಅವರನ್ನು ಊರಿಗೆ ಕಳಿಸಿಕೊಟ್ಟಿದ್ದಾರೆ. ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕಾರ್ಯಕರ್ತರ ನಿರಂತರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಯಾಝ್ ಭಾಯಿ ಮತ್ತು ಅವರ ಕುಟುಂಬಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ