janadhvani

Kannada Online News Paper

ಅನುಕಂಪ ಗಿಟ್ಟಿಸಲು ಸಾಲ ಮನ್ನಾ ಅಸ್ತ್ರ ಪ್ರಯೋಗಿಸಿದ ಬಿಎಸ್​ವೈ- ಡಿಕೆಶಿ ಕಿಡಿ

ಬೆಂಗಳೂರು: ಕಾಂಗ್ರೆಸ್​ ಶಾಸಕರೆಲ್ಲರೂ ಒಟ್ಟಿಗೆ ಇದ್ದೇವೆ. ಎಲ್ಲರೂ ನಮ್ಮ ಜತೆಯಲ್ಲಿದ್ದಾರೆ. ಆನಂದ್​ ಸಿಂಗ್​ ಸಹ ನಮ್ಮ ಸಂಪರ್ಕದಲ್ಲಿದ್ದಾರೆ. ಹಾಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ಶತಃ ಸಿದ್ಧ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಡಿಕೆಶಿ ಬಿಜೆಪಿಗೆ ಮ್ಯಾಜಿಕ್​ ನಂಬರ್​ ಸಿಗುವುದಿಲ್ಲ. ಹಾಗಾಗಿ ಬಿಎಸ್​ವೈಗೆ ಆತಂಕ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯದ ಜನತೆಯ ಅನುಕಂಪ ಗಿಟ್ಟಿಸಲು ಸಾಲ ಮನ್ನಾ ಅಸ್ತ್ರ ಪ್ರಯೋಗಿಸಿದ್ದಾರೆ. ಮೆಜಾರಿಟಿ ಇಲ್ಲದ ಪಕ್ಷ ಹೇಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಡಿಕೆಶಿ ಬಿಎಸ್​ವೈ ವಿರುದ್ಧ ಕಿಡಿ ಕಾರಿದರು.

ಸುಪ್ರೀಂ ಕೋರ್ಟ್​ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಕಾಂಗ್ರೆಸ್​ ಮತ್ತು ಜೆಡಿಎಸ್​ ಅಧಿಕಾರಕ್ಕೆ ಬಂದೇ ಬರುತ್ತದೆ. ಆಪರೇಷನ್​ ಕಮಲ ಅಸಾಧ್ಯವಾದ ಮಾತು. ನಮ್ಮ ಶಾಸಕರ ರಕ್ಷಣೆಗೆ ರೆಸಾರ್ಟ್​ ರಾಜಕೀಯ ಅನಿವಾರ್ಯವಾಗಿದೆ ಎಂದು ಡಿಕೆಶಿ ತಿಳಿಸಿದರು.

error: Content is protected !! Not allowed copy content from janadhvani.com