ಕೊಚ್ಚಿ: ಲುಲು ಮಾಲ್ನಲ್ಲಿ ಪ್ರದರ್ಶಿಸಿದ ಪಾಕಿಸ್ತಾನದ ಧ್ವಜವು ಭಾರತದ ಧ್ವಜಕ್ಕಿಂತ ದೊಡ್ಡದಾಗಿದೆ ಎಂಬ ಸುಳ್ಳು ಸುದ್ದಿಯಿಂದಾಗಿ ಲುಲು ಮಾರ್ಕೆಟಿಂಗ್ ಮ್ಯಾನೇಜರ್ ಕೆಲಸ ಕಳೆದುಕೊಂಡಿದ್ದಾರೆ. ಹತ್ತು ವರ್ಷಕ್ಕೂ ಹೆಚ್ಚು ಕಾಲ ಲುಲು ಬ್ರ್ಯಾಂಡ್ ಮಾನ್ಯತೆ ನೋಡಿಕೊಳ್ಳುತ್ತಿದ್ದ ಆತಿರಾ ನಂಬ್ಯಾದಿರಿ ಅವರು ನಕಲಿ ಸುದ್ದಿಯಿಂದಾಗಿ ಕೆಲಸ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಆತಿರಾ ತಮ್ಮ ಲಿಂಕ್ಡ್ಇನ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.
ಒಂದು ದಶಕದಿಂದ ಕಂಪನಿಯಲ್ಲಿ ಕೆಲಸ ಮಾಡಿದ ನಾನು ಸುಳ್ಳು ಪ್ರಚಾರದಿಂದ ಕೆಲಸ ಕಳೆದುಕೊಂಡೆ, ಭಾರತೀಯಳಾಗಿ ನಾನು ಹೆಮ್ಮೆ ಪಡುತ್ತೇನೆ ಮತ್ತು ಈ ದೇಶದ ಪ್ರಜೆಯಾಗಿ ತನ್ನ ದೇಶದ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದೇನೆ ಎಂದು ಆತಿರಾ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ದ್ವೇಷವನ್ನು ಹರಡುವುದು ಮತ್ತು ವ್ಯಕ್ತಿಗಳ ಜೀವನ ಮತ್ತು ಕೆಲಸವನ್ನು ನಾಶಮಾಡುವ ಚಟುವಟಿಕೆಗಳಿಂದ ದೂರವಿರಲು ಎಲ್ಲರೊಂದಿಗೆ ಮನವಿ ಮಾಡುತ್ತೇನೆ. ಇದರಿಂದ ತನಗೆ ನಷ್ಟ ಉಂಟಾಗಿದೆ, ಆದರೆ ಈ ದ್ವೇಷಕ್ಕೆ ಯಾರೂ ಒಳಗಾಗಬಾರದು ಎಂದು ಆತಿರಾ ತಮ್ಮ ಪೋಸ್ಟ್ ಅನ್ನು ಕೊನೆಗೊಳಿಸಿದ್ದಾರೆ.

ಲುಲು ಮಾಲ್ನಲ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ವಿವಿಧ ತಂಡಗಳ ಧ್ವಜಗಳನ್ನು ಪ್ರದರ್ಶಿಸಲಾಗಿತ್ತು. ಕೆಲವು ಚಿತ್ರಗಳಲ್ಲಿ ಧ್ವಜವು ದೊಡ್ಡದು ಮತ್ತು ಚಿಕ್ಕದಾಗಿ ಕಾಣಿಸುತ್ತದೆ. ಏಕೆಂದರೆ ಅವುಗಳನ್ನು ವಿವಿಧ ಎತ್ತರಗಳಲ್ಲಿ ಇರಿಸಲಾಗಿದೆ. ಆದರೆ ವಾಸ್ತವವಾಗಿ ಅವೆಲ್ಲವೂ ಒಂದೇ ಗಾತ್ರದಲ್ಲಿದೆ. ಫೋಟೋದ ಕೋನವನ್ನು ಅವಲಂಬಿಸಿ ಗಾತ್ರದಲ್ಲಿ ಕಂಡುಬರುವ ವ್ಯತ್ಯಾಸವನ್ನು ಹಿಂದುತ್ವವಾದಿಗಳು ನಕಲಿ ಸುದ್ದಿಗಳನ್ನು ಹರಡಲು ದುರುಪಯೋಗಪಡಿಸಿಕೊಂಡರು. ಈ ಸುಳ್ಳು ಸುದ್ದಿಯನ್ನು ಏಷ್ಯಾನೆಟ್ ಕನ್ನಡ ಆವೃತ್ತಿ ಸುವರ್ಣ ನ್ಯೂಸ್ ಮತ್ತು ಹಿಂದುತ್ವವಾದಿ ಪ್ರತಿಶ್ ವಿಶ್ವನಾಥನ್ ಹಬ್ಬಿಸಿದ್ದಾರೆ.
ಸುವರ್ಣ ನ್ಯೂಸ್ ವಿರುದ್ಧವಾಗಿ ಸ್ವತಃ ಏಷ್ಯಾನೆಟ್ ಮಲಯಾಳಂ ವಾರ್ತೆಯಲ್ಲಿ ಫ್ಯಾಕ್ಟ್ ಚೆಕ್ ಮೂಲಕ ಇದು ಸುಳ್ಳು ಸುದ್ದಿಯೆಂದು ವರದಿಮಾಡಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ