ಇತ್ತೀಚಿನ ಕೆಲವು ದಿನಗಳಿಂದ ಭೀಕರ ಸ್ವರೂಪ ಪಡೆಯುತ್ತಿರುವ ಇಸ್ರೇಲ್- ಫಲಸ್ತೀನ್ ಯುಧ್ದವು ಸಹಸ್ರಾರು ನಾಗರಿಕರನ್ನು ಬಲಿ ತೆಗೆದುಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಸಮುದಾಯ ತಕ್ಷಣ ಎಚ್ಚೆತ್ತುಕೊಂಡು ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ರಾಜ್ಯ ಸಮಿತಿ ಆಗ್ರಹಿಸಿದೆ. ಇಸ್ರೇಲ್ ಮತ್ತು ಫಲಸ್ತೀನ್ ನಡುವಿನ ಶಾಂತಿ ಸಂಸ್ಥಾಪನೆಗಾಗಿ ಈಗಾಗಲೇ ಹಲವು ಒಪ್ಪಂದಗಳು ನಡೆದಿದ್ದು ಅವೆಲ್ಲವನ್ನೂ ಇಸ್ರೇಲ್ ಉಲ್ಲಂಘಿಸುತ್ತಾ ಬಂದಿದೆ.
ಯಾರದೇ ಉಗ್ರ ನಿಲುವುಗಳೊಂದಿಗೆ ಸಹಮತ ಹೊಂದಲು ಸಾಧ್ಯವಿಲ್ಲ. ಅದೇ ವೇಳೆ ಸ್ವಂತ ನೆಲದಿಂದ ಅನ್ಯಾಯವಾಗಿ ಹೊರದಬ್ಬಲ್ಪಡುವ ಫಲಸ್ತೀನಿಯರ ಹಕ್ಕುಗಳ ಮರುಸ್ಥಾಪನೆಗೆ ನ್ಯಾಯೋಚಿತ ಮಧ್ಯಸ್ಥಿಕೆ ವಹಿಸಲು ಅರಬ್- ಇಸ್ಲಾಮಿಕ್ ರಾಷ್ಟ್ರಗಳು ಮತ್ತು ಜಗತ್ತಿನ ಇತರ ಪ್ರಬಲ ರಾಷ್ಟ್ರಗಳು ವಿಶೇಷ ಮುತುವರ್ಜಿ ವಹಿಸಬೇಕೆಂದು ಅದು ಕರೆನೀಡಿದೆ.
ನಿರಾಯುಧರಾದ ಜನಸಾಮಾನ್ಯರನ್ನು ಗುರಿಯಾಗಿಟ್ಟು ನಡೆಸುವ ಯಾವುದೇ ಯುಧ್ದಗಳು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇಸ್ರೇಲ್ ತನ್ನ ಕ್ರೌರ್ಯವನ್ನು ಕೊನಗೊಳಿಸಲು ಮುಂದಾಗಬೇಕೆಂದು ಎಸ್.ವೈ.ಎಸ್.ಒತ್ತಾಯಿಸಿದೆ.
ಮಂಗಳೂರಿನಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಳ್ ಸಅದಿ ಅಧ್ಯಕ್ಷತೆ ವಹಿಸಿದರು. ನಿಕಟ ಪೂರ್ವ ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಉಧ್ಘಾಟಿಸಿದರು. ಸಯ್ಯಿದ್ ಶಾಫೀ ತಂಙಳ್, ಸಯ್ಯಿದ್ ಹಾಮೀಂ ತಂಙಳ್, ಅಡ್ವೊಕೇಟ್ ಹಂಝತ್ ಉಡುಪಿ, ಅಬ್ದುಲ್ ರಹ್ಮಾನ್ ರಝ್ವಿ, ಹಸೈನಾರ್ ಆನೆಮಹಲ್, ಇಬ್ರಾಹೀಂ ಖಲೀಲ್ ಮಾಲಿಕಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಎಂ.ಬಿ.ಎಂ.ಸ್ವಾದಿಖ್ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಖ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ