ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ದೋಹಾ ಝೋನ್ ವತಿಯಿಂದ ಪವಿತ್ರ ರಬೀವುಲ್ ಅವ್ವಲ್ ಮಾಸದ ಪ್ರಯುಕ್ತ, ಜಗತ್ತಿಗೆ ಕರುಣೆಯ ಪ್ರವಾದಿ ಎಂಬ ಘೋಷವಾಕ್ಯದೊಂದಿಗೆ ಮಹಬ್ಬಾ ಮೀಲಾದ್ ಕಾನ್ಫರೆನ್ಸ್ ದಿನಾಂಕ 12-10-2023 ರಂದು ದೋಹಾದ ಮೆಕಾನೀಸ್ ರೆಸಾರ್ಟ್ ಸಭಾಂಗಣದಲ್ಲಿ ನಡೆಯಿತು.
ಮೀಲಾದ್ ಕಾನ್ಫರೆನ್ಸ್ ಸ್ವಾಗತ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಖ್ ಮುದುಂಗಾರ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವು, ಕೆಸಿಎಫ್ ದೋಹಾ ಝೋನ್ ಕಂಟ್ರೋಲರ್ ಸತ್ತಾರ್ ಅಶ್ರಫಿ ಮಠ ರವರಿಂದ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾದಿಯವರ ಜೀವನ ಚರಿತ್ರೆಯ ಕುರಿತಾಗಿ ಸಂಕ್ಷಿಪ್ತವಾಗಿ ವಿವರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಫಿ ಅನ್ವರಿ ಕೊಡಗು ರವರು ಪ್ರವಾದಿಯವರ ಸ್ನೇಹದ ಕುರಿತಾದ ಹುಬ್ಬುರ್ರಸೂಲ್ ಪ್ರಭಾಷಣಗೈದರು. ಕೆಸಿಎಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ, ಪ್ರಕಾಶನ ವಿಭಾಗದ ಅಧ್ಯಕ್ಷ ಯಹ್ಯಾ ಸ’ಅದಿ ವಿರಾಜಪೇಟೆ, ದೋಹಾ ಝೋನ್ ಸಂಘಟನಾ ವಿಭಾಗ ಕಾರ್ಯದರ್ಶಿ ಫಾರೂಖ್ ಜೆಪ್ಪು ಸಾಂದರ್ಭಿಕವಾಗಿ ಆಶಂಸೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಡ್ಮಿನ್ ವಿಭಾಗ ಅಧ್ಯಕ್ಷರಾದ ಕಬೀರ್ ಹಾಜಿ ದೇರಳಕಟ್ಟೆ, ಸಂಘಟನಾ ವಿಭಾಗ ಕಾರ್ಯದರ್ಶಿ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ ಎಮ್ಮೆಮ್ಮಾಡು, ದೋಹಾ ಝೋನ್ ಅಧ್ಯಕ್ಷರಾದ ನಿಯಾಝ್ ಕುರ್ನಾಡ್, ಕೋಶಾಧಿಕಾರಿ ಅಬೂಬಕ್ಕರ್ ವಕ್ರ ಉಪಸ್ಥಿತರಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸದಸ್ಯರಾದ ಯೂಸುಫ್ ಸಖಾಫಿ ಅಯ್ಯಂಗೇರಿ ರವರ ನೇತೃತ್ವದಲ್ಲಿ ಮೌಲಿದ್ ಹಾಗೂ ದುಆ ಮಜ್ಲಿಸ್ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಭಾಗವಾಗಿ ಕೆಸಿಎಫ್ ಮದೀನಾ ಖಲೀಫಾ ಝೋನ್ ಅಧ್ಯಕ್ಷರಾದ ಇಸ್ಹಾಖ್ ನಿಝಾಮಿ ಹಾಗೂ ಸಂಗಡಿಗರಿಂದ ಸುಮಧುರವಾದ ಬುರ್ದಾ ಹಾಗೂ ಮಕ್ಕಳ ಪ್ರತಿಭಾ ಕಾರ್ಯಕ್ರಮ ಮೂಡಿಬಂತು.
ದೋಹಾ ಝೋನ್ ನಾಯಕರಾದ ಹಫೀಝ್ ವಕ್ರ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸದಕತುಲ್ಲಾ ಕೂಳೂರು ವಂದಿಸಿದರು. ಝಕರಿಯ್ಯಾ ಸಂಜಾದ್ ಕಾರ್ಯಕ್ರಮ ನಿರೂಪಿಸಿದರು.