ಕೋಝಿಕ್ಕೋಡ್ | ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲಿ ಆಕ್ರಮಣಗಳು ಮತ್ತು ದಾಳಿಗಳು ಹೆಚ್ಚುತ್ತಿರುವ ಮಧ್ಯೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಪ್ಯಾಲೇಸ್ಟಿನಿಯನ್ ಮುಫ್ತಿ ಮತ್ತು ವಿದ್ವಾಂಸ ಶೈಖ್ ಮುಹಮ್ಮದ್ ಹುಸೈನ್ ಅವರೊಂದಿಗೆ ಮಾತುಕತೆ ನಡೆಸಿದರು. ಪ್ರಸ್ತುತ ಯುದ್ಧದ ಪರಿಸ್ಥಿತಿ ಮತ್ತು ಪ್ಯಾಲೇಸ್ಟಿನಿಯನ್ನರ ಆತಂಕದ ವಾತಾವರಣ ಬಗ್ಗೆ ವಿಚಾರಿಸಿದ ಗ್ರ್ಯಾಂಡ್ ಮುಫ್ತಿ, ಭಾರತೀಯ ಜನತೆಯ ಹೃತ್ಪೂರ್ವಕ ಕಾಳಜಿ, ಬೆಂಬಲ ಮತ್ತು ಪ್ರಾರ್ಥನೆಗಳನ್ನು ತಿಳಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ಯಾಲೆಸ್ಟೀನಿಯನ್ನರ ಸಂಕಟ ಮತ್ತು ಅವರ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಅರ್ಥಮಾಡಿಕೊಂಡ ಭಾರತ, ಅದೇ ನಿಲುವಿನೊಂದಿಗೆ ಮುಂದುವರಿಯತ್ತಿದೆ ಎಂಬುದನ್ನು ಖಚಿತಪಡಿಸುವ ಕ್ರಮಗಳನ್ನು ನಿರೀಕ್ಷಿಸುತ್ತಿರುವುದಾಗಿ ಶೈಖ್ ಮುಹಮ್ಮದ್ ಹುಸೈನ್ ಅವರು ಗ್ರ್ಯಾಂಡ್ ಮುಫ್ತಿಯೊಂದಿಗೆ ಭರವಸೆ ವ್ಯಕ್ತಪಡಿಸಿದ್ದಾರೆ.
ವಿಶ್ವದ ಪ್ರಮುಖ ಶಕ್ತಿಶಾಲಿ ರಾಷ್ಟ್ರಗಳಲಿ ಒಂದಾಗಿ ಬೆಳೆಯುತ್ತಿರುವ ಭಾರತವು ಪ್ರಸ್ತುತ ಪಶ್ಚಿಮ ಏಷ್ಯಾದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವಲ್ಲಿ ರಾಜತಾಂತ್ರಿಕ ಪಾತ್ರವನ್ನು ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಭಾರತ ಸರ್ಕಾರದ ಕ್ರಮಗಳಿಗೆ ಗ್ರ್ಯಾಂಡ್ ಮುಫ್ತಿ ಮಧ್ಯಸ್ಥಿಕೆ ವಹಿಸಬೇಕೆಂದೂ ಶೈಖ್ ಹುಸೈನ್ ಮನವಿ ಮಾಡಿದರು.
ಪ್ಯಾಲೆಸ್ತೀನರು ತಮ್ಮ ನಾಡು ಮತ್ತು ಈ ನೆಲವನ್ನು ಎಂದಿಗೂ ಬಿಡುವುದಿಲ್ಲ ಎಂದು ಹೇಳಿದ ಶೈಖ್ ಮುಹಮ್ಮದ್ ಹುಸೈನ್ ಭಾರತೀಯ ಜನರ ಬೆಂಬಲ ಮತ್ತು ಪ್ರಾರ್ಥನೆಗಾಗಿ ಮನವಿ ಮಾಡಿದರು.
ಅಖಿಲ ಭಾರತ ಜಮ್ಇಯ್ಯತುಲ್ ಉಲಮಾದ ಆಶ್ರಯದಲ್ಲಿ ನಡೆದ ಪ್ರಾರ್ಥನಾ ಸಭೆಗಳು ಮತ್ತು ಒಗ್ಗಟ್ಟಿನ ರ್ಯಾಲಿಗಳ ಬಗ್ಗೆ ಗ್ರ್ಯಾಂಡ್ ಮುಫ್ತಿ ಗಮನ ಸೆಳೆದರು. ಭಾರತ ಸರ್ಕಾರದ ತ್ವರಿತ ಕ್ರಮಕ್ಕಾಗಿ ನಾವು ಸಕ್ರಿಯವಾಗಿ ಮಧ್ಯಪ್ರವೇಶಿಸುತ್ತೇವೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುತ್ತೇವೆ ಎಂದು ಪ್ಯಾಲೆಸ್ತೀನ್ ಮುಫ್ತಿಗೆ ತಿಳಿಸಿದರು. ನಿನ್ನೆ ಮಧ್ಯಾಹ್ನ ದೂರವಾಣಿ ಸಂಭಾಷಣೆಯ ಮೂಲಕ ಇವರಿಬ್ಬರೂ ಮಾತುಕತೆ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ