ಮಂಗಳೂರು: ಕರಾವಳಿಯ ಮಂಗಳಾ ದೇವಿ ಸ್ಥಾನಕ್ಕೆ ಅದರದೇ ಆದ ಪ್ರಾಮುಖ್ಯತೆ ಇದೆ. 800 ವರ್ಷದ ಇತಿಹಾಸವಿರುವ ಪ್ರಾಚೀನ ಆರಾಧನಾ ಸ್ಥಳವನ್ನು ಇತ್ತೀಚೆಗೆ ಸಂಘೀ ಕಿರಾತಕರು ತಮ್ಮ ವಿದ್ವೇಶ ಸಾಧನೆಗೆ ಬಲಸಬಹುದೆಂದು ಭಾವಿಸಿದ್ದು, ಅವರ ಶ್ರಮ ಎಂದಿಗೂ ಫಲಕಾರಿಯಾಗದು ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ತಿಳಿಸಿದ್ದಾರೆ.
ಶ್ರೀ ಮಂಗಳೆಗೆ ಅದರದೇ ಆದ ಮಹತ್ವವಿದೆ. ಈ ಶೃದ್ದಾ ಕೇಂದ್ರ ಈ ನಾಡಿನ ಅನಂತ ವೈವಿದ್ಯತೆ ಮತ್ತು ಸಾಮರಸ್ಯತೆಯ ಸಂಕೇತವಾಗಿ ಉಳಿದುಕೊಂಡಿದೆ. ಶ್ರೀ ಮಂಗಳೆಯ ಊರಿನ ನಾಮಕರಣಕ್ಕೆ ಮುಸ್ಲಿಮರ ವಿಶೇಷ ಕೊಡುಗೆ ಇದೆ. ಮಂಗಳಾಪುರಮ್ ಎಂಬ ಉಚ್ಚಾರಣೆಗೆ ದಕ್ಷಿಣ ಭಾರತದ ವ್ಯಾಪಾರಿ ಮುಸ್ಲಿಮ್ ಸಮುದಾಯದ ಬಹುವಾದ ಕೊಡುಗೆ ಇದೆ.
ಇಂತಹ ಪ್ರಮುಖ ಆಸ್ತ ಕೇಂದ್ರಕ್ಕೆ ವಿವಾದವನ್ನು ಎಳೆದು ಹಾಕುವ ಸಂಘೀ ಪ್ರಯತ್ನ ಎಂದೂ ಫಲಿಸದು. ಮುಸ್ಲಿಮ್ ವ್ಯಾಪರಸ್ತರೊಂದಿಗೆ ನಿಷೇಧ ಕರೆ ನೀಡಿದ ಶರಣ್ ತನ್ನ ಕರೆಯನ್ನು ಜಿಲ್ಲೆಯ ಅಷ್ಟೂ ವ್ಯವಹಾರ ಮಳಿಗೆಗೆ ವಿಸ್ತರಿಸಿ ಅಲ್ಲಿಗೆ ಭೇಟಿ ನೀಡುವ ಮುಸ್ಲಿಮ್ ಗ್ರಾಹಕರಿಗೆ ಅನ್ವಯಿಸುವ ಪ್ರಸ್ತಾಪ ಮಾಡಿ ನೋಡಲಿ ಎಂದು ಸವಾಲು ಹಾಕಿದ್ದಾರೆ.
ವರ್ತಕರನ್ನು ಮತ್ತು ಗ್ರಾಹಕರನ್ನು ಮತೀಯ ದೃಷ್ಟಿಯಲ್ಲಿ ತಾರತಮ್ಯ ಗೊಳಿಸುವುದು ಸಾಂವಿಧಾನಿಕ ಹಕ್ಕುಗಳ ಸಂಪೂರ್ಣ ಉಲ್ಲಂಘನೆ ಆಗಿದೆ. ಜಿಲ್ಲೆಯಲ್ಲಿ ಯಾವುದೇ ಮೂಲದಿಂದಾದರೂ ಮತೀಯ ವಿದ್ವೇಶ ಉಲ್ಬಣ ಗೊಳಿಸುವ ವೈದಿಕ ಪ್ರಯತ್ನಕ್ಕೆ ನಾಂದಿ ಹಾಡಲು ಈ ವೈದಿಕೇತರ ಶರಣ್ ಅನ್ನು ಸಂಘೀ ಗಳು ಬಳಸುತ್ತಿರುವುದನ್ನು ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಅರಿಯಬೇಕಿದೆ.
ಸಂಘೀ ಶರಣನು ಸಾದ್ಯವಾದರೆ ತನ್ನ ಧ್ವಜ ಸ್ಥಾಪನೆಯನ್ನು ತಾನು ಮ್ಯಾನ್ ಪವರ್ ನಡೆಸುತ್ತಿರುವ ಮಾಲ್, ಆಸ್ಪತ್ರೆ ಸಂಸ್ಥೆಗಳಿಗೆ ವಿಸ್ತರಿಸಿ ನೋಡಲಿ.ಅಲ್ಲಿನ ನಿರ್ಧಿಷ್ಟ ಸಮುದಾಯದ ಗ್ರಾಹಕರನ್ನು ನಿಷೇಧಿಸುವ ಅಭಿಯಾನಕ್ಕೆ ನಾಂದಿ ಹಾಡಿ ಪರಿಣಾಮ ನೋಡಲಿ ಎಂದು ಕೆ.ಅಶ್ರಫ್ ( ಮಾಜಿ ಮೇಯರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ