KCF ಮತ್ತು ಹಲವಾರು ದೀನಿ ಸ್ಥಾಪನೆಗಳಿಗೆ ಸಹಾಯ ಸಹಕಾರ ನೀಡುತ್ತಿರುವ ಬುರೈದದ ಯುವ ಉದ್ಯಮಿ ಸಮಾಜ ಸೇವಕ ಮುಹಮ್ಮದ್ ಸಾದಿಕ್ ಕಾಟಿಪಳ್ಳ ಅವರನ್ನು KCF ಅಲ್ ಕಸೀಮ್ ಝೋನ್ ವತಿಯಿಂದ ಬುರೈದ ಸೆಕ್ಟರ್ ನಡೆಸಿದ ರಬೀಹ್ -23 ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಇಹ್ಸಾನ್ ಕರ್ನಾಟಕ ಇದರ ಮರ್ಜಾನ್ ಹಟ್ ಮದರಸ ಯೋಜನೆಗೆ ಒಂದು ಸಂಪೂರ್ಣ ಮದರಸ ತನ್ನ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕೊಡುಗೆ ನೀಡಿದ್ದನ್ನು ಹಾಗು ಹಲವಾರು ಸಹಾಯ ಸಹಕಾರಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ವೇದಿಕೆಯಲ್ಲಿ KCF ಸೌದಿ ರಾಷ್ಟೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಾಲಿಹ್ ಬೆಳ್ಳಾರೆ, ಸಂಘಟನಾ ಇಲಾಖೆ ಅಧ್ಯಕ್ಷರಾದ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು, ಇಹ್ಸಾನ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಕಣ್ಣಂಗಾರ್ , ಶಿಕ್ಷಣ ಇಲಾಖೆ ಕಾರ್ಯದರ್ಶಿ ಯಾಕೂಬ್ ಸಖಾಫಿ , ಝೋನ್ ಕಾರ್ಯದರ್ಶಿ ಬಷೀರ್ ಕನ್ಯಾನ, ಕೋಶಾಧಿಕಾರಿ ಇರ್ಷಾದ್ ಸಚ್ಚರಿಪೇಟೆ , ಬುರೈದ ಸೆಕ್ಟರ್ ಅಧ್ಯಕ್ಷರಾದ ಮುಸ್ತಫಾ ಲತೀಫಿ, ಕಾರ್ಯದರ್ಶಿ ಬಶೀರ್ ಬನ್ನೂರ್ , ಖಯ್ಯುಮ್ ಜಾಲ್ಸೂರ್,
RSC ನ್ಯಾಷನಲ್ ಫೈನಾನ್ಸ್ ಕಂಟ್ರೋಲರ್ ಡಾ. ನವಾಝ್ ಹಸನಿ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ