ಶಿವಮೊಗ್ಗ : ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ) ಕರ್ನಾಟಕ ರಾಜ್ಯ ಸಮಿತಿ ಇದರ ನೂತನ ಮದ್ರಸ ನಿರ್ಮಾಣ ಯೋಜನೆಯಡಿ ಶಿವಮೊಗ್ಗ ಜಿಲ್ಲೆಗೊಳಪಟ್ಟ ತೀರ್ಥಹಳ್ಳಿ ತಾಲ್ಲೂಕಿನ ಹೊಸಳ್ಳಿ ಎಂಬಲ್ಲಿ ನಿರ್ಮಾಣಗೊಂಡ ನೂತನ ಮದ್ರಸದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಬಹಳ ವಿಜೃಂಭಣೆಯಿಂದ ಜರುಗಿತು.
ನೂತನ ಮದ್ರಸ ಕಟ್ಟಡದ ಉದ್ಘಾಟನೆ ಯನ್ನು ಎಸ್. ಎಂ. ಎ. ರಾಜ್ಯಾಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙ್ಙಳ್ ನೆರವೇರಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ತೀರ್ಥಹಳ್ಳಿ ಸಯ್ಯಿದ್ ಅಬೂಬಕ್ಕರ್ ಸಿದ್ದೀಕ್ ತಂಙ್ಙಳ್ ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಯ್ಯಿದ್ ಶಹೀದುದ್ದೀನ್ ತಂಙ್ಙಳ್ ಮಾತನಾಡಿ ಎಸ್. ಎಂ. ಎ. ರಾಜ್ಯ ಸಮಿತಿಯು ಮೂರು ಹೊಸ ಮದ್ರಸಗಳನ್ನು ನಿರ್ಮಿಸುವುದರ ಮೂಲಕ. ಹೊಸ ಕ್ರಾಂತಿಯನ್ನೇ ನಿರ್ಮಾಣ ಮಾಡಿದೆ. ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣ ಕಲಿಯುವ ಮೂಲಕ ನಮ್ಮ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಬೇಕೆಂದು ಅವರು ಸಭೀಕರಿಗೆ ಕಿವಿ ಮಾತು ಹೇಳಿದರು.

ಎಸ್. ಎಂ. ಎ. ರಾಜ್ಯ ಕೋಶಾಧಿಕಾರಿ ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್.ಜೆ.ಎಂ.ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ.ಕಾಮಿಲ್ ಸಖಾಫಿ ಸುರಿಬೈಲ್, ಎಸ್.ಎಂ.ಎ.ಶಿವಮೊಗ್ಗ ಜಿಲ್ಲಾಧ್ಯಕ್ಷ ಕಡ್ತೂರ್ ಇಬ್ರಾಹೀಂ ಹಾಜಿ, ಎಸ್.ಎಂ.ಎ. ದ.ಕ.ವೆಸ್ಟ್ ಜಿಲ್ಲಾಧ್ಯಕ್ಷ ಅಡ್ಯಾರ್ ಪದವು ಎ. ಪಿ. ಇಸ್ಮಾಯೀಲ್, ರಾಜ್ಯ ಉಪಾಧ್ಯಕ್ಷರುಗಳಾದ ಎ.ಕೆ.ಅಹ್ಮದ್,ಮುಹಮ್ಮದ್ ಹನೀಫ್ ಬೆಜ್ಜವಳ್ಳಿ , ರಾಜ್ಯ ಕಾರ್ಯದರ್ಶಿ ಎನ್.ಎಸ್.ಉಮರ್ ಮಾಸ್ಟರ್ ಉಪಸ್ಥಿತರಿದ್ದರು.ಕಾರ್ಯಕ್ರಮದ ಪ್ರಾರಂಭದಲ್ಲಿ ಎಸ್. ಎಂ. ಎ. ರಾಜ್ಯ ಕ್ಷೇಮ ವಿಭಾಗ ಕಾರ್ಯದರ್ಶಿ ಕೆ.ಎ. ಅಶ್ರಫ್ ಸಖಾಫಿ ಮೂಡಡ್ಕ ಸ್ವಾಗತಿಸಿ ಕೊನೆಯಲ್ಲಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್