ಸ್ವಾಗತ ಸಮಿತಿ ಚೆಯರ್ಮೇನ್ ಆಗಿ ಮೂಸ ಬಸರ ಹಾಜಿ ಆಯ್ಕೆ
ಉತ್ತರ ಕರ್ನಾಟಕದ ಮೊದಲ ಸಮನ್ವಯ ಶಿಕ್ಷಣ ಸಂಸ್ಥೆ ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಇದರ ದಶಮ ಸಂಭ್ರಮದ ಭಾಗವಾಗಿ ಶಾರ್ಜಾದಲ್ಲಿ ಇದೇ ಬರುವ ನವೆಂಬರ್ 3ರಂದು ಮುಹಬ್ಬತೇ ಜೀಲಾನಿ ಬೃಹತ್ ಸಮಾವೇಶ ನಡೆಯಲಿದೆ..
ಶಾರ್ಜಾ ರೋಲದಲ್ಲಿರುವ ನೂರುಲ್ ಹಿಲಾಲ್ ಪಾರ್ಟಿ ಹಾಲ್ ನಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ಮುಈನುಸುನ್ನಾ ವಿದ್ಯಾಸಂಸ್ಥೆ ಅಧ್ಯಕ್ಷರೂ, ಪೋಸೋಟ್ ತಂಙಳ್ ರವರ ಸುಪುತ್ರ ರಾದ ಸಯ್ಯಿದ್ ಶಹೀರ್ ಅಲ್ ಬುಖಾರಿ ಪೋಸೋಟ್ ತಂಙಳ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ನಿರ್ವಹಣೆಗಾಗಿ ಆಯ್ಕೆ ಮಾಡಿದ ಸ್ವಾಗತ ಸಮಿತಿಯ ಚೆಯರ್ಮೇನ್ ಆಗಿ ಮೂಸ ಬಸರ ಹಾಜಿ ಮಂಜನಾಡಿ,ಜನರಲ್ ಕನ್ವಿನರ್ ಆಗಿ ಶರೀಫ್ ಸಾಲೆತ್ತೂರು, ಕೋಶಾಧಿಕಾರಿ ಯಾಗಿ ಲತೀಫ್ ತಿಂಗಳಾಡಿ ಆಯ್ಕೆ ಯಾದರು.
ಕರೀಂ ಮುಸ್ಲಿಯಾರ್ ,ತೆಕ್ಕಾರ್ ರಫೀಕ್ ಮುಸ್ಲಿಯಾರ್ ವೈಸ್ ಚೆಯರ್ಮೇನ್ ಗಳಾಗಿ ,ಹಾಗು ಯು.ಟಿ ನೌಶಾದ್,ನಾಸಿರ್ ತಳಿಪರಂಬ್,ನಝೀರ್ ನೆಕ್ಕಿಲ್ ಕನ್ವಿನರ್ಸ್ ಗಳಾಗಿ ಆಯ್ಕೆ ಮಾಡಲಾಯಿತು.. ಮುಈನುಸುನ್ನಾ ದುಬೈ ಪ್ರೊವಿಷನಲ್ ಸಮಿತಿ ಅಧ್ಯರಾದ ಅಬ್ದುಲ್ಲಾ ಪೆರುವಾಯಿ ಯವರ ನಿವಾಸದಲ್ಲಿ ಮುಈನುಸುನ್ನಾ ಡೈರೆಕ್ಟರ್ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸ್ಥೆ ಯ ಕಾರ್ಯದರ್ಶಿ ಕಮಾಲುದ್ದೀನ್ ಅಂಬ್ಲಮೊಗರ್, ರಾಷ್ಟ್ರೀಯ ಅಧ್ಯಕ್ಷ ರಾದ ಅಶ್ರಫ್ ಸತ್ತಿಕ್ಕಲ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ