ಮಂಗಳೂರು:ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಲವೇ ತಿಂಗಳಲ್ಲಿ ಎಲೆಕ್ಟ್ರಿಕ್ ಬಸ್ಗಳು ಓಡಾಟ ನಡೆಸಲಿದೆ. ಕೆಎಸ್ಆರ್ಟಿಸಿ ಮಂಗಳೂರು ವಿಭಾಗ, ಕಾಸರಗೋಡು, ಭಟ್ಕಳ ಹಾಗೂ ಮಣಿಪಾಲದಿಂದ ಎಲೆಕ್ಟ್ರಿಕ್ ಬಸ್ಗಳ ಓಡಾಟ ನಡೆಸಲು ಚಿಂತನೆ ನಡೆಸಿದೆ.
ಇದರಿಂದಾಗಿ ಈ ದೂರದ ಊರುಗಳಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಆಗಮನ ಹಾಗೂ ನಿರ್ಗಮನಕ್ಕೆ ಸುಲಭವಾಗಲಿದೆ. ಜತೆಗೆ ಪ್ರಯಾಣಿಕರ ಆಕರ್ಷಣೆಗೂ ಕಾರಣವಾಗಲಿದೆ. ಈ ಹಿಂದೆ ವಿಮಾನ ನಿಲ್ದಾಣಕ್ಕೆ ಸಿಟಿ ವೋಲ್ವೋ ಸಂಚಾರ ಏರ್ಪಡಿಸಿದರೂ ಪ್ರಯಾಣಿಕರ ಕೊರತೆ ತಲೆದೋರಿತ್ತು.
ಒಟ್ಟು ನಾಲ್ಕು ಎಲೆಕ್ಟ್ರಿಕ್ ಬಸ್ಗಳು ವಿಮಾನ ನಿಲ್ದಾಣಕ್ಕೆ ಓಡಾಟ ನಡೆಸುವ ಸಂಭವ ಇದ್ದು, ಈ ಬಸ್ಗಳಿಗೆ ಪ್ರತ್ಯೇಕ ಪರವಾನಗಿಯ ಅಗತ್ಯ ಇರುವುದಿಲ್ಲ. ಕೇವಲ ನೋಂದಣಿ ಮಾಡಿಸಿದರೆ ಸಾಕು, ಅಂತಾರಾಜ್ಯ ಓಡಾಟವನ್ನೂ ನಡೆಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಬಸ್ಗಳು ವಿಮಾನ ನಿಲ್ದಾಣವನ್ನು ಸಂಪರ್ಕಿಸಲಿವೆ.
ವಿಮಾನಯಾನ ಕಂಪನಿಗಳು ತಮ್ಮ ವೆಬ್ಸೈಟ್ನಲ್ಲೂ ಎಲೆಕ್ಟ್ರಿಕ್ ಬಸ್ ಓಡಾಟ ಹಾಗೂ ಮುಂಗಡ ಬುಕ್ಕಿಂಗ್ ಬಗ್ಗೆ ಮಾಹಿತಿ ನೀಡಿದರೆ, ಇದು ಇನ್ನಷ್ಟು ಪರಿಣಾಮಕಾರಿಯಾಗಲಿದೆ. ಈ ಕುರಿತಂತೆ ವಿವಿಧ ವಿಮಾನಯಾನ ಕಂಪನಿಗಳ ಜತೆ ಕೆಎಸ್ಆರ್ಟಿಸಿ ಅಧಿಕಾರಿಗಳು ಪತ್ರವ್ಯವಹಾರಕ್ಕೆ ನಡೆಸಿದ್ದಾರೆ. ಮಾತ್ರವಲ್ಲ ಇತರೆ ಪ್ರಯಾಣಿಕರಿಗೂ ಈ ಬಸ್ ಸಂಚಾರ ಅನುಕೂಲವಾಗಲಿದೆ ಎನ್ನುತ್ತಾರೆ ಕೆಎಸ್ಆರ್ಟಿಸಿ ಅಧಿಕಾರಿಗಳು.
ಇದಕ್ಕೆ ಅವಶ್ಯಕವಾದ ಚಾರ್ಜಿಂಗ್ ಪಾಯಿಂಟ್ ನಿರ್ಮಿಸುವ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರದಿಂದ ಬಸ್ಗಳು ಬಂದ ಕೂಡಲೇ ಈ ಬಗ್ಗೆ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದು ಮಂಗಳೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ
ಮಂಗಳೂರು ವಿಭಾಗಕ್ಕೆ 45 ಎಲೆಕ್ಟ್ರಿಕ್ ಬಸ್ಗಳು ಬರಲಿದೆ. ಇದರಲ್ಲಿ 4 ಎಲೆಕ್ಟ್ರಿಕ್ ಬಸ್ ವಿಮಾನ ನಿಲ್ದಾಣಕ್ಕೆ, ಉಳಿದ ಬಸ್ಗಳನ್ನು ಮಂಗಳೂರಿನಿಂದ ಧರ್ಮಸ್ಥಳ, ಉಡುಪಿ, ಕಾಸರಗೋಡು, ಕುಂದಾಪುರ-ಭಟ್ಕಳ ನಡುವೆ ಸಂಚಾರಕ್ಕೆ ಇಳಿಸುವ ಸಾಧ್ಯತೆ ಇದೆ. ಇದಕ್ಕಾಗಿ ಮಂಗಳೂರು, ಉಡುಪಿ, ಕುಂದಾಪುರ, ಧರ್ಮಸ್ಥಳಗಳಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್ ಮಾಡಲಾಗುತ್ತದೆ. ಒಂದು ಬಸ್ ಒಮ್ಮೆ ಚಾರ್ಜ್ ಮಾಡಿದರೆ 200 ಕಿ.ಮೀ. ವರೆಗೆ ಸಂಚರಿಸಬಹುದು. ಪೂರ್ತಿ ಚಾರ್ಜಿಂಗ್ಗೆ ನಾಲ್ಕು ತಾಸು ಬೇಕು. ಹಾಗಾಗಿ ದೂರದ ಊರುಗಳಿಗೆ ಎಲೆಕ್ಟ್ರಿಕ್ ಬಸ್ ಓಡಾಟ ಸುಲಭವಲ್ಲ ಎನ್ನುತ್ತಾರೆ ಅಧಿಕಾರಿಗಳು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)