ದಮ್ಮಾಮ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ)ಮಂಗಳೂರು ಇದರ ಅಧೀನದಲ್ಲಿ ಮರ್ಕಝ್ ತಅಲೀಮಿಲ್ ಇಹ್ಸಾನ್ ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಕಾರ್ಯಾಚರಿಸುತ್ತಿದೆ.
ಧಾರ್ಮಿಕ ಮತ್ತು ಲೌಕಿಕ ಶಿಕ್ಷಣವನ್ನು ನೀಡುವ
ವಿದ್ಯಾಸಂಸ್ಥೆಯಲ್ಲಿ ಎರಡು ಸಾವಿರಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇದರ ಅಂಗವಾಗಿ ಅಕ್ಟೋಬರ್ 26 ಗುರುವಾರ ಮುಸ್ಸಂಜೆ ಸೌದಿ ಅರೇಬಿಯಾದ ದಮ್ಮಾಂನಲ್ಲಿ ಬೃಹತ್ ಫ್ಯಾಮಿಲಿ ಮುಲಾಖಾತ್ ಆಯೋಜಿಸಲಾಗಿದೆ.
ಡಿಕೆಯಸ್ಸಿ ವಿಷನ್ 30 ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಕೂಡಾ ಈ ಸಮಾರಂಭದಲ್ಲಿ ಹಮ್ಮಿಕೊಂಡಿದ್ದು ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಡಾ! ಹುಸೈನ್ ಸಖಾಫಿ ಚುಳ್ಳಿಕ್ಕೋಡ್, ಬಿ.ಎಂ.ಫಾರೂಖ್ ಎಂ.ಎಲ್.ಸಿ. ದ.ಕ. ಜಿಲ್ಲಾ ವಖ್ಫ್ ಬೋರ್ಡ್ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಮರ್ಕಝುಲ್ ಇಹ್ಸಾನ್ ಮೂಳೂರು ಪ್ರಾಂಶುಪಾಲ ಹಬೀಬುರ್ರಹ್ಮಾನ್, ಪತ್ರಕರ್ತ ಬಿ.ಎಂ. ಹನೀಫ್, ಝಕರಿಯ್ಯಾ ಅಲ್ ಮುಝೈನ್, ಶೇಖ್ ಎಕ್ಸಪರ್ಟೈಸ್, ಇಬ್ರಾಹೀಂ ರಕ್ವಾನೀ, ನಝೀರ್ ಅಲ್ ಫಲಾಹ್, ಶಾಕಿರ್ ಹೈಸಂ, ಇನ್ನಿತರ ಉಲಮಾ- ಉಮರಾ ನಾಯಕರು, ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳಿಗೆ ಇಸ್ಲಾಮಿಕ್ ಸ್ಫರ್ಧೆ, ದಫ್ಫ್, ಕ್ವಿಝ್, ಖಿರಾಅತ್, ನಅತ್ ಮೊದಲಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಅತ್ಯಾಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಲಾಗಿದೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ