ಕೊಚ್ಚಿ: ಕಳಮಶ್ಶೇರಿಯಲ್ಲಿ ನಡೆದ ಸ್ಫೋಟದ ತನಿಖೆಯು ಬಿರುಸಿನಿಂದ ಸಾಗುತ್ತಿರುವಾಗಲೇ ಬಾಂಬ್ ಇಟ್ಟಿದ್ದು ನಾನೇ ಎಂದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ವರದಿಯಾಗಿದೆ.
ಕೊಚ್ಚಿ ಮೂಲದವನೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತ್ರಿಶೂರ್ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಮಧ್ಯಾಹ್ನ ಒಂದೂವರೆ ಗಂಟೆಗೆ ಪೊಲೀಸ್ ಠಾಣೆ ತಲುಪಿದ ಆತನನ್ನು ಪೋಲೀಸರು ಕೂಲಂಕಷವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆತನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.
ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಆತನ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ಈತನಿಗೆ ಮಾನಸಿಕ ಸಮಸ್ಯೆ ಇದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.
ಸ್ಪೋಟ ನಡೆದ ತಕ್ಷಣವೇ ಸ್ಥಳದಿಂದ ನಿರ್ಗಮಿಸಿದ ನೀಲಿ ಕಾರನ್ನು ಕೇಂದ್ರೀಕೃರಿಸಿಯೂ ತನಿಖೆ ನಡೆಯುತ್ತಿದೆ.
ಕಳಮಶ್ಶೇರಿಯಲ್ಲಿ ಯೆಹೋವನ ಅಧಿವೇಶನ ನಡೆಯುತ್ತಿದ್ದ ಕನ್ವೆನ್ಷನ್ ಸೆಂಟರ್ನಲ್ಲಿ ಬೆಳಗ್ಗೆ 9.45ರ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ