ವಿಟ್ಲ: ಇಲ್ಲಿನ ಸರ್ಕಾರಿ ಸಮುದಾಯ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಸಾಂಕೇತಿಕ ಪ್ರತಿಭಟನೆಯನ್ನು ದಕ್ಷಿಣ ಕನ್ನಡ ದಲಿತ್ ಸೇವಾ ಸಮಿತಿ ರೈತ ಸಂಘ, ಖಿದ್ಮತ್ ಫೌಂಡೇಶನ್ ವಿಟ್ಲ ವಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಂಘ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ರೈತ ಸಂಘ ನಾಯಕರಾದ ರಾಮಣ್ಣ, ವಿಟ್ಲ ಖ್ಗದ್ಮತ್ ಫೌಂಡೇಶನ್ ಅಧ್ಯಕ್ಷರಾದ ಹಾಜಿ ಹಬ್ದುಲ್ ಹಮೀದ್ ಕೊಡಂಗಾಯಿ ಮಾತನಾಡಿ ಆಸ್ಪತ್ರೆಯ ವ್ಯವಸ್ಥೆಗಳು ಮುಂದಿನ ದಿನಗಳಲ್ಲಿ ಸರಿಪಡಿಸದಿದ್ದಲ್ಲಿ ಈ ಹೋರಾಟ ದೊಡ್ಡಮಟ್ಟದಲ್ಲಿ ಮುಂದರಿಯುತ್ತದೆ ಎಂದರು.
ಜನಪ್ರತಿನಿಧಿಗಳು, ಬಡವರ ಪಾಲಿಗೆ ಆಸರೆಯಾಗಿರುವ ವಿಟ್ಲ ಸರ್ಕಾರಿ ಆಸ್ಪತ್ರೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶೀಘ್ರ ವ್ಯವಸ್ಥೆ ಸರಿಪಡಿಸಬೇಕು. ಸರ್ಜನ್ ವೈಧ್ಯರು ಎಕ್ಸೆರೆ, ಸ್ಕ್ಯಾನಿಂಗ್, ಡಯಾಲಿಸ್ ಸೆಂಟರ್ ಹಾಗೂ ಗರ್ಭಿಣಿಯರಿಗೆ ಸಿಸೇರಿಯನ್ ವ್ಯವಸ್ಥೆ ಮಾಡಬೇಕು. ರಾತ್ರಿ ವೇಳೆಯಲ್ಲಿ ಸೂಕ್ತ ಚಿಕಿತ್ಸೆಗಾಗಿ ವೈಧ್ಯಯರ ಸೇವೆ ಒದಗಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿ ಭೇಟಿ ನೀಡುವ ತನಕ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಲಾಯಿತು.
ಇದೇ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದ ಕಾರಣದಿಂದ ಧರಣಿಯನ್ನು ತಾತ್ಕಾಲಿಕ ಹಿಂಪಡೆಯಲಾಯಿತು.
ಶೀಘ್ರದಲ್ಲೇ ಸಮಸ್ಯೆ ಬಗೆಹರಿಯದಿದ್ದಲ್ಲಿ ವಿಟ್ಲ ಪರಿಸರದ ಎಲ್ಲಾ ಸಂಘಟನೆಗಳು ಜೊತೆ ಸೇರಿ ಮತ್ತೆ ಹೋರಾಟ ಮುಂದುವರಿಸುವುದಾಗಿ
ನಾಯಕರು ತಿಳಿಸಿದರು. ಈ ಸಂದರ್ಭದಲ್ಲಿ ದಲಿತ್ ಸಮಿತಿ ಜಿಲ್ಲಾಧ್ಯಕ್ಷರು ದಲಿತ್ ಸೇವಾ ಸಮಿತಿಯ ನಾಯಕರು ಖಿದ್ಮತ್ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಸಲೀಂ ಹಾಜಿ ಹಾಗೂ ಖಿದ್ಮತ್ ಫೌಂಡೇಶನ್ ಸಮಿತಿಯ ನಾಯಕರು ಉಪಸ್ಥಿತರಿದ್ದರು ಚಂದ್ರಶೇಖರ್ ಯು ಸ್ವಾಗತಿಸಿದರು.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್