ದುಬೈ: ಗಾಝಾದಲ್ಲಿ ಗಾಯಗೊಂಡಿರುವ ಪ್ಯಾಲೆಸ್ಟೀನಿಯರಿಗೆ ಚಿಕಿತ್ಸೆ ನೀಡಲು ಆಸಕ್ತಿ ಹೊಂದಿರುವ ಆರೋಗ್ಯ ಕಾರ್ಯಕರ್ತರಿಗೆ ಯುಎಇಯಲ್ಲಿ ನೋಂದಣಿ ಪ್ರಾರಂಭವಾಗಿದೆ ಎಂದು ಆರೋಗ್ಯ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಅಧಿಕಾರಿಗಳು ನೋಂದಣಿ ಲಿಂಕ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಅವರು ಘೋಷಿಸಿದ ಗ್ಯಾಲಂಟ್ ನೈಟ್-3 ಕಾರ್ಯಾಚರಣೆಯ ಭಾಗವಾಗಿ ಯುಎಇ, ಗಾಝಾದಲ್ಲಿ ಫೀಲ್ಡ್ ಆಸ್ಪತ್ರೆಯನ್ನು ಸ್ಥಾಪಿಸುತ್ತಿದೆ. ಇದರ ಭಾಗವಾಗಿ ಆರೋಗ್ಯ ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ. ನೋಂದಣಿ ಸಮಯದಲ್ಲಿ ಹೆಸರು, ಫೋನ್ ಸಂಖ್ಯೆ ಮತ್ತು ಎಮಿರೇಟ್ಸ್ ಐಡಿ ಸೇರಿದಂತೆ ವಿವರಗಳನ್ನು ಒದಗಿಸಬೇಕು. ಗಾಝಾ ಅಥವಾ ಈಜಿಪ್ಟ್ ಅಥವಾ ಎರಡರಲ್ಲೂ ಸೇವೆ ಸಲ್ಲಿಸಲು ಬಯಸುತ್ತೀರಾ ಎಂಬುದನ್ನು ಸಹ ನಿರ್ದಿಷ್ಟಪಡಿಸಬೇಕು.
https://gallantknight3.doh.gov.ae ಮೂಲಕ ನೋಂದಣಿ ಮಾಡಬಹುದು.
ಯುಎಇ ಅಧ್ಯಕ್ಷ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಅವರ ಆದೇಶದ ಮೇರೆಗೆ 150 ಹಾಸಿಗೆಗಳ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಆಸ್ಪತ್ರೆಯಲ್ಲಿ ತೀವ್ರ ನಿಗಾ, ಅರಿವಳಿಕೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂಳೆಚಿಕಿತ್ಸೆ, ಪೀಡಿಯಾಟ್ರಿಕ್ಸ್ ಮತ್ತು ಸ್ತ್ರೀರೋಗ ವಿಭಾಗಗಳನ್ನು ಹೊಂದಿರುತ್ತದೆ. ಆಂತರಿಕ ಔಷಧ, ದಂತವೈದ್ಯಕೀಯ, ಮನೋವೈದ್ಯಕೀಯ ಮತ್ತು ಕುಟುಂಬ ಔಷಧದ ಚಿಕಿತ್ಸಾಲಯಗಳು ಸಹ ಕಾರ್ಯನಿರ್ವಹಿಸುತ್ತವೆ. ಆಸ್ಪತ್ರೆಯು ಸಿಟಿ ಇಮೇಜಿಂಗ್, ಲ್ಯಾಬೋರೇಟರಿ, ಫಾರ್ಮಸಿ ಮತ್ತು ಇತರ ಸೌಲಭ್ಯಗಳನ್ನು ಹೊಂದಿರುತ್ತದೆ. ಆಸ್ಪತ್ರೆಯನ್ನು ಸ್ಥಾಪಿಸಲು ಬೇಕಾದ ಸಾಮಗ್ರಿಗಳನ್ನು ಐದು ವಿಮಾನಗಳಲ್ಲಿ ಗಾಜಾಕ್ಕೆ ತರಲಾಗಿದೆ.


ಅದೇ ಸಮಯದಲ್ಲಿ, ಗಾಝಾದ ಮೇಲೆ ಪರಮಾಣು ಬಾಂಬ್ ಹಾಕುವ ಇಸ್ರೇಲ್ನ ಹೆರಿಟೇಜ್ ರಕ್ಷಣೆಯ ಸಚಿವರ ಹೇಳಿಕೆಯನ್ನು ಯುಎಇ ತೀವ್ರವಾಗಿ ಖಂಡಿಸಿದೆ. ಯುಎಇ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯು ಆಕ್ರಮಣಕಾರಿ, ನಾಚಿಕೆಗೇಡಿನ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ನರಮೇಧಕ್ಕೆ ಕರೆ ನೀಡುವುದು ಕಳವಳಕಾರಿ ಹೇಳಿಕೆಯಾಗಿದ್ದು, ಗಾಝಾದಲ್ಲಿ ತಕ್ಷಣವೇ ಕದನ ವಿರಾಮಕ್ಕೆ ಯುಎಇ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ