janadhvani

Kannada Online News Paper

ಸಮ್ಮಿಶ್ರ ಸರ್ಕಾರದ ಆಡಳಿತ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ-ಎಚ್‌.ಡಿ.ದೇವೇಗೌಡ

ಬೆಂಗಳೂರು: ‘ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ‘ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳು, ಮಂತ್ರಿ ಮಂಡಲದ ರಚನೆ, ಸಮನ್ವಯ ಸಮಿತಿ ರಚನೆ ಹಾಗೂ ಸರ್ಕಾರದ ಆಡಳಿತ ವಿಚಾರದಲ್ಲಿ ಭಾಗಿ ಆಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.

‘ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ  ರಚನೆಯ ಬಗ್ಗೆ ಕೆಲವು ಊಹಪೋಹಾ ಸುದ್ದಿಗಳು ಹರಿದಾಡುತ್ತಿರುವುದನ್ನು ನಾನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ’ ಎಂದಿದ್ದಾರೆ.

error: Content is protected !! Not allowed copy content from janadhvani.com