ಇಸ್ಲಾಂ ಧರ್ಮವು ಮನುಕುಲದ ಒಳಿತಿಗಾಗಿ ಸೃಷ್ಟಿ ಕರ್ತನೇ ರೂಪಿಸಿದ ನೀತಿ ಸಂಹಿತೆಗಳಾಗಿದ್ದು ಪ್ರವಾದಿಗಳಿಂದ ಸಹಾಬತ್ ಮತ್ತು ಅವರ ನಂತರದ ಸಜ್ಜನರ ಮೂಲಕ ನಮ್ಮನ್ನು ತಲುಪಿದೆ. ಪೂರ್ವಿಕರಿಂದ ಪರಂಪರಾಗತವಾಗಿ ಬಂದ ಧಾರ್ಮಿಕ ಆಚಾರ ವಿಚಾರಗಳನ್ನು ಯಥಾವತ್ತಾಗಿ ಪಾಲಿಸುವುದೇ ನಿಜವಾದ ಧರ್ಮ. ಅದನ್ನೇ ಅಹ್ಲ್ ಸುನ್ನತಿ ವಲ್ ಜಮಅ: ಎನ್ನಲಾಗುತ್ತದೆ. ಎಂದು ಐಸಿಎಫ್ ಬಹರೈನ್ ದಅವಾ ವಿಂಗ್ ಅಧ್ಯಕ್ಷರಾದ ಬಹು. ಅಬೂಬಕರ್ ಲತೀಫಿ ಉಸ್ತಾದ್ ಹೇಳಿದರು.
ಅವರು ಕೆಸಿಎಫ್ ಹಾಮದ್ ಟೌನ್ ಸೆಕ್ಟರಿನ ವತಿಯಿಂದ ನಡೆದ ಸಂಘಟನಾ ತರಬೇತಿಗೆ ನಾಯಕತ್ವ ನೀಡಿ ಮಾತನಾಡಿದರು.
ಸುನ್ನೀ ಸಿದ್ಧಾಂತಗಳಿಗೆ ವಿರುದ್ಧವಾಗಿ ಸೃಷ್ಟಿಸಲಾದ ಕೃತಕ ಪಂತಗಳು ಅತ್ಯಂತ ಅಪಾಯಕಾರಿಯಾಗಿದ್ದು ಸುನ್ನಿಗಳು ಸಂಘಟಿತರಾಗಿ ಜನ ಸಾಮಾನ್ಯರಿಗೆ ನೈಜ ಆಚಾರ ವಿಚಾರಗಳನ್ನು ತಲುಪಿಸಲು ಪ್ರಯತ್ನಿಸಬೇಕೆಂದು ಅವರು ಕರೆ ನೀಡಿದರು.
ಜನರಿಗೆ ಧರ್ಮ ಬೋಧನೆ ನೀಡುವುದರ ಜತೆಗೆ ಕಷ್ಟದಲ್ಲಿರುವ ಜನರಿಗೆ ಸಹಾಯ ಸಹಕಾರವನ್ನು ನೀಡಿ ಸಾಂತ್ವನ ಕಾರ್ಯಾಚರಣೆಯಲ್ಲಿ ಸಹಾ ಮುಂದಾಗುತ್ತಿರುವ ಕೆಸಿಎಫ್ ಕನ್ನಡಿಗರ ಪಾಲಿಗೆ ಬಹುದೊಡ್ಡ ಭಾಗ್ಯವಾಗಿದ್ದು ಇದನ್ನು ಮತ್ತಷ್ಟು ಪ್ರಬಲಗೊಳಿಸಿ ಬೆಳೆಸಬೇಕೆಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕೆಸಿಎಫ್ ಹಾಮದ್ ಟೌನ್ ಸೆಕ್ಟರ್ ಅಧ್ಯಕ್ಷರಾದ ಜನಾಬ್ ನಯಾಝ್ ಬಟ್ಕಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಸ್ವಲಾತ್ ಮಜ್ಲಿಸಿಗೆ ಸಂಘಟನಾ ವಿಭಾಗದ ಅಧ್ಯಕ್ಷರಾದ ಖಲಂದರ್ ಉಸ್ತಾದ್ ನೇತೃತ್ವ ನೀಡಿದರು.
ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಬೆಳ್ಮ ಸ್ವಾಗತಿಸಿದರು. ಸೆಕ್ಟರ್ ಕಾರ್ಯದರ್ಶಿ ಸುಫೈದ್ ಕೃಷ್ಣಾಪುರ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ