ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯು ಸುಮಾರು ಒಂದು ತಿಂಗಳಿನಿಂದ ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿ,ನಿಸರ್ಗ ಹೋಟೆಲ್ ಬಳಿ ಯಿಂದ ಚೆಕ್ ಪೋಸ್ಟ್ ತನಕ ಮುಂದುವರೆದ ಕಾಂಕ್ರಿಟ್ ರಸ್ತೆ ಮತ್ತು ಭಾರತ್ ಪೆಟ್ರೋಲ್ ಪಂಪ್ ನಿಂದ ಚರ್ಚ್ ಸೇತುವೆವರೆಗೆ ಚತುಷ್ಪಥ ರಸ್ತೆ ಯನ್ನು ಕೂಡಲೇ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಸತತ ಹೋರಾಟ ಮಾಡುತ್ತಾ ಬಂದಿದೇವೆ.

ಈ ನಿಟ್ಟಿನಲ್ಲಿ ನಮ್ಮ ಬೇಡಿಕೆ ಈಡೇರದಿದ್ದಾಗ ನಮ್ಮ ಸಮಿತಿಯ ತೀರ್ಮಾನದಂತೆ ದಿನಾಂಕ 16/11/23 ರಂದು ಬೆಳಿಗ್ಗೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ,ನಮ್ಮ ಧರಣಿಗೆ ಮಣಿದ PWD ಇಲಾಖೆ ಇವತ್ತು ತುರ್ತಾಗಿ ನಮ್ಮೊಂದಿಗೆ ಮಾತುಕತೆಗೆ ಬಂದು ನಮ್ಮ ಎಲ್ಲಾ ಬೇಡಿಕೆಯನ್ನು ಈಡೇರಿಸುವುದ್ದಳದೆ, ದೀಪಾವಳಿ ಹಬ್ಬ ಇರುವುದರಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಒಂದು ವಾರದ ಸಮಯ ಕೇಳಿ,ದಿನಾಂಕ 20 /11/23 ರಂದು ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ವೇದಿಕೆಯ ಎಲ್ಲಾ ಪದಾಧಿಕಾರಿಗಳು ಮತ್ತು ವಿಶೇಷವಾಗಿ ಹಿರಿಯರ ಸಮ್ಮುಖದಲ್ಲಿ ಭರವಸೆ ಕೊಟ್ಟಿರುವುದರಿಂದ,ನಮ್ಮ ಧರಣಿ ಸತ್ಯಾಗ್ರಹ ವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಇವತ್ತಿನ ತುರ್ತು ಸಭೆಯಲ್ಲಿ ವೇದಿಕೆಯ ಸಂಚಾಲಕರಾದ ಸಿರಾಜ್ ಹುಸೇನ್ ಬಜ್ಪೆ ,ಸಹ ಸಂಚಾಲಕರಾದ ಇಂಜಿನಿಯರ್ ಇಸ್ಮಾಯಿಲ್ ,
ಹಿರಿಯರಾದ ರಾಜ್ಯ ದಲಿತ ಸಂಘರ್ಷ ಸಮಿತಿಯ ದೇವದಾಸ್, ಮೊನಕ ,ಸಲೀಮ್ ಹಾಜಿ,ಮೊಯಿದಿನಕ,ಮುಲ್ಕಿ ಮೂಡಬಿದ್ರೆ ಐಟಿ ಸೆಲ್ ಅಧ್ಯಕ್ಷರಾದ ನಿಸಾರ್ ಕರಾವಳಿ ,ಗ್ರಾಮ ಕುಡುಂಬಿ ಸಮಾಜದ ಮುಖಂಡರಾದ ಶೇಖರ್ ಗೌಡ, SSF ಸಂಘಟನೆಯ ಮುಖಂಡರಾದ ಮುಫೀದ್ ರಹ್ಮಾನ್,ಹನೀಫ್ ಕಿನ್ನಿಪದವು ,ದಲಿತ ಸಂಘರ್ಷ ಸಮಿತಿಯ ಮಂಜಪ್ಪ ಪುತ್ರನ್ ಇರ್ಷಾದ್ ಬಜ್ಪೆ ,ಉದ್ಯಮಿ ಸಿದ್ದಿಕ್ ,ಮನ್ಸೂರು ಕರಂಬಾರ್ ,ಶೇಖರ್ ಎಕ್ಕಾರ್ ,ಮಕ್ಬೂಲ್ ಜರಿ ,ಷರೀಫ್ ,ಇಫ್ತಿಕರ್ ಯುಸುರ ,ಶಾಯಿದ್ ,ಸಲಾಂ ಬಜ್ಪೆ ಹಸನ್ ಭಾವ ಕಿನ್ನಿಪದವು , sdpi ಮುಖಂಡ ನಜೀರ್ ,ಮನ್ಸೂರು ಬಜ್ಪೆ ಆರಿಫ್ ಕೊಳಂಬೆ ,ಅಝರ್ ಸಾಗರ ಅನ್ವರ್ , ನವಾಜ್ ಭಟ್ರಕೆರೆ,ಅನ್ವರ್ ಸಾಬ್ ,ಆಟೋ ಸಂಘಟನೆಯ ಭಾಸ್ಕರ್ ಮತ್ತು ಝಕೀರ್ ,ದಲಿತ ಸಂಘಟನೆಯ ಲಕ್ಷ್ಮೀಶ್ ,ಗ್ರಾ ಪಂ ಮಾಜಿ ಅಧ್ಯಕ್ಷರುಗಳು,ಸದಸ್ಯರುಗಳು kpcc ಸಾಮಾಜಿಕ ಜಾಲತಾಣದ ಹಫೀಜ್ ಕೊಳಂಬೆ ಮತ್ತು PWD ಇಲಾಖೆಯ ಅಧಿಕಾರಿಗಳು ಮತ್ತು ನಾಗರೀಕ ಹಿತರಕ್ಷಣಾ ಸಮಿತಿಯ ಹಲವಾರು ನಾಯಕರು ಭಾಗ ವಹಿಸಿದರು.
ಸಿರಾಜ್ ಬಜ್ಪೆ
(,ನಾಗರಿಕರ ಹಿತರಕ್ಷಣಾ ವೇದಿಕೆ)
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ