ಉಡುಪಿ, ನ.14: ಮಹತ್ವದ ಪ್ರಗತಿಯೊಂದರಲ್ಲಿ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬೆಳಗಾವಿಯ ಕುಡುಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಈತ ಮಂಗಳೂರು ಏರ್ ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ. ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಎರಡು ದಿನಗಳಿಂದ ಈತನ ಬೆನ್ನು ಬಿದ್ದಿದ್ದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು.ಕೊಲೆ ಮಾಡಿ ಊರೂರು ಸುತ್ತಾಡುತ್ತಿದ್ದ ಮಧ್ಯೆ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ.
ಉಡುಪಿ ಜಿಲ್ಲೆ ಮಲ್ಪೆ ಠಾಣಾ ವ್ಯಾಪ್ತಿಯ ತೃಪ್ತಿನಗರದಲ್ಲಿ ಕಳೆದ ಭಾನುವಾರ ಬೆಳಿಗ್ಗೆ ಈ ಘೋರ ಕೃತ್ಯ ನಡೆದಿದೆ. ಮನೆಯ ಯಜಮಾನಿ ಹಸೀನಾ(46) ಮಕ್ಕಳಾದ ಅಫ್ನಾನ್(23), ಅಯ್ನಾಝ್(21) ಹಾಗೂ ಆಸಿಂ(12) ಎಂಬುವರನ್ನ ದುಷ್ಕರ್ಮಿ ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಒಂದೇ ಘಟನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆಯ ಹಿಂದೆ ವಿವಿಧ ಆಯಾಮಗಳ ಅನುಮಾನವನ್ನು ವ್ಯಕ್ತಪಡಿಸಿ ಕೊಲೆ ಪಾತಕಿಯ ಶೋಧಕ್ಕೆ ಮುಂದಾಗಿದ್ದರು.
ನವೆಂಬರ್ 14, ಮಂಗಳವಾರ ಬೆಳಿಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಂತ್ರಸ್ತ ಕುಟುಂಬದ ಮುಖ್ಯಸ್ಥ ನೂರ್ ಮೊಹಮ್ಮದ್ ಅವರೊಂದಿಗೆ ಖುದ್ದಾಗಿ ಮಾತನಾಡಿ, ಶೀಘ್ರ ಬಂಧಿಸುವ ಭರವಸೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ