ಮಂಗಳೂರು: ಆಧುನಿಕ ಮತ್ತು ಜಾಗತಿಕ ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಜನರು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸುವುದು, ಪ್ರತಿಭಟಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಸೌಂದರ್ಯವಾಗಿದೆ ಮತ್ತು ಹಕ್ಕು ಕೂಡಾ ಹೌದು. ಅದು ನೈಸರ್ಗಿಕವಾಗಿ ಬಂದ ಗುಣ. ಪ್ರಜಾ ಪ್ರಭುತ್ವ ಸಂವಿಧಾನ ಅದನ್ನೇ ಪ್ರತಿಪಾದಿಸುತ್ತದೆ. ಆದರೆ ಸರಕಾರಗಳು ಪ್ರಸ್ತುತ ಜನರು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುವುದು ಮತ್ತು ಸಾಮೂಹಿಕ ಜನಾಂಗ ಹತ್ಯೆ ಕೃತ್ಯದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ಅಪರಾಧ ಎಂದು ಬಿಂಬಿಸುವ ಮಟ್ಟಿಗೆ ತಲುಪಿರುವುದು ದುರಂತವೇ ಸರಿ.
ಇತ್ತೀಚೆಗೆ ಭಾರತ ಸರಕಾರ ಮಧ್ಯ ಪ್ರಾಚ್ಯ ದೇಶಗಳ ಅಂತಾರಾಷ್ಟ್ರೀಯ ಬಿಕ್ಕಟನ್ನು ತನ್ನ ಸಾಂಪ್ರದಾಯಿಕ ನಿಲುವು ಮುಖಾಂತರ ವ್ಯಕ್ತ ಪಡಿಸಿದ ಹೊರತಾಗಿಯೂ ಕೂಡಾ ದೆಹಲಿ ಸರಕಾರ ಜನರು, ತಮ್ಮ ಆರಾಧನಾ ಕೇಂದ್ರಗಳಲ್ಲಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುವುದನ್ನು, ಪೊಲೀಸು ಕ್ರಮ ಮೂಲಕ ತಡೆ ಒಡ್ಡಲು ಪ್ರಯತ್ನಿಸಿರುವುದು ಖಂಡನೀಯ.
ಅದರಂತೆ ಇತ್ತೀಚೆಗೆ ಸರಕಾರ ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಜನರ ಪ್ರತಿಭಟನೆಯ ಹಕ್ಕನ್ನು ತಡೆದಿವುದು ಅಷ್ಟೇ ಖಂಡನೀಯ.
ಸರಕಾರ ಮತ್ತು ವಿಶ್ವ ಸಂಸ್ಥೆ ಪ್ರಾರ್ಥನೆ ಮತ್ತು ಪ್ರತಿಭಟನೆಯ ಅಧಿಕೃತ ವಿಷಯಗಳ ಬಗ್ಗೆ ಸುತ್ತೋಲೆ ಹೊರಡಿಸಲಿ. ಅದರಲ್ಲಿ ಜನರು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುವುದನ್ನು , ಸಾದ್ಯವಾದರೆ ನಿಷೇಧಿಸುವ ಪ್ರಯತ್ನವನ್ನಂತೂ ಮಾಡದಿರಲಿ ಎಂದು ಕೆ.ಅಶ್ರಫ್ ( ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ