ಉಡುಪಿ: ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ತಾಯಿ, ಮಕ್ಕಳ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿ ಹಂತಕ ಪ್ರವೀಣ್ ಅರುಣ್ ಚೌಗಲಿ ಎಂಬಾತನನ್ನು ಬಂಧಿಸಲಾಗಿದ್ದು, ಪೋಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಾಲ್ವರನ್ನು ಹತ್ಯೆಮಾಡಲು ಕೊಲೆಗೀಡಾದ ಐನಾಝ್ ಳೊಂದಿಗಿನ ದ್ವೇಷವೇ ಪ್ರಮುಖ ಕಾರಣ ಎಂದು ಪೋಲೀಸರು ತಿಳಿಸಿದ್ದಾರೆ. ಕೊಲೆಗೆ ಮೂರು ಉದ್ದೇಶವನ್ನು ಹಂತಕ ವಿಚಾರಣೆ ವೇಳೆ ತಿಳಿಸಿದ್ದು, ಈ ಬಗ್ಗೆ ಸಂತ್ರಸ್ಥ ಕುಟುಂಬದೊಂದಿಗೆ ಪರಿಶೀಲಿಸಿ ಮಾಹಿತಿ ನೀಡುತ್ತೇವೆ ಎಂದು ಜಿಲ್ಲಾ ಎಸ್ಪಿ ಡಾ.ಕೆ. ಅರುಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು.
ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್ ಗಗನಸಖಿ ಐನಾಝ್ ಮೇಲಿನ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಅವರು ಹೇಳಿದರು.ಇದೊಂದು ಪೂರ್ವನಿಯೋಜಿತವಾಗಿ ಕೃತ್ಯ ಎಂದು ಹೇಳಿದರು. ವಿವಾಹಿತನಾಗಿರುವ ಆರೋಪಿ, ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದರು.
ಐನಾಝ್ ಕೊಲೆಯಾದ ದಿನವೇ ಬೆಳಿಗ್ಗೆ 11 ಗಂಟೆಗೆ ದುಬೈಗೆ ಏರ್ಇಂಡಿಯಾ ವಿಮಾನದಲ್ಲಿ ಗಗನ ಸಖಿಯಾಗಿ ಕಾರ್ಯನಿರ್ವಹಿಸಲು ಹೋಗಬೇಕಿತ್ತು. ಆದರೆ ಅಂದೇ ಬೆಳಿಗ್ಗೆ ಯಮರೂಪಿಯಾಗಿ ಬಂದ ಪ್ರವೀಣ್ ಮನೆಯಲ್ಲಿದ್ದ ನಾಲ್ವರನ್ನು ಹತ್ಯೆಗೈದು ಪರಾರಿಯಾಗಿದ್ದ.
ನಾಲ್ವರನ್ನು ಹತ್ಯೆಗೈದು ಬಸ್ ಮೂಲಕ ಮಂಗಳೂರಿಗೆ ಹೋಗಿ ಅಲ್ಲಿಂದ ತನ್ನ ಹೆಕ್ಟರ್ ಕಾರಿನಲ್ಲಿ ಬೆಳಗಾವಿಗೆ ಹೋಗಿ ಪರಿಚಯದ ನೀರಾವರಿ ಇಲಾಖೆಯ ಅಧಿಕಾರಿ ಮನೆಯಲ್ಲಿ ಒಂದು ದಿನ ಅಡಗಿದ್ದ. ಅಲ್ಲಿಂದ ನೇರ ತನ್ನೂರು ಸಾಂಗ್ಲಿಗೆ ಹೋಗಿ ಅವಿತುಕೊಳ್ಳುವ ಪ್ಲಾನ್ ರೂಪಿಸಿದ್ದ ಹಂತಕ,
ಕೊಲೆಯಾದ ತಕ್ಷಣ ಎಲರ್ಟ್ ಆದ ಪೊಲೀಸರು ಐನಾಝ್ ದುಡಿಯುತ್ತಿದ್ದ ಏರ್ಪೋರ್ಟ್ಗೆ ಭೇಟಿ ನೀಡಿ ಉದ್ಯೋಗಿಗಳ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲಿ ರಜೆ ಹಾಕಿದ್ದ ಪ್ರವೀಣ್ ಮಾಹಿತಿ ಕಲೆ ಹಾಕಿ ಫೋನ್ ಟ್ರಾಕ್ ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ