ಕೊಡಗು: ಆಧುನಿಕ ಪಾಶ್ಚಾತ್ಯ ಸಂಸ್ಕೃತಿಗಳಿಗೆ ಮಾರು ಹೋಗಿ ತಮ್ಮ ತನವನ್ನು ಕಳೆದುಕೊಂಡು ಮದ್ಯ-ಮಾದಕಗಳಿಗೆ ಬಲಿಯಾಗಿ ಸಮಾಜಕ್ಕೆ ಕಂಟಕವಾಗುವವರಿಗೆ ಧಾರ್ಮಿಕ-ನೈತಿಕ ಪಾಠ ಬೋಧಿಸಿ ಸಮಾಜದ ಒಳಿತಿಗಾಗಿ ಕಾರ್ಯಾಚರಿಸಿ ದುರ್ಬಲರ ಬೆನ್ನೆಲುಬಾಗಿರುವ ಒಂದು ಸಮೂಹವನ್ನು ಕಟ್ಟಿ ಬೆಳೆಸುವ ಸಂಘಟನೆಯೇ ಸುನ್ನೀ ಯುವಜನ ಸಂಘ.
ಕರ್ನಾಟಕದಲ್ಲಿ ಸಂಘಟನೆಗೆ ಇದೀಗ ಮೂವತ್ತರ ಸಂಭ್ರಮ. ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಘೋಷಣೆಯೊಂದಿಗೆ 2024ನೇ ಜನವರಿ 24ರಂದು SYS ರಾಜ್ಯ ಸಮ್ಮೇಳನ ನಡೆಯುತ್ತಿದ್ದು, ಅದರ ಪ್ರಚಾರಾರ್ಥ ಪ್ರತೀ ಜಿಲ್ಲೆಗಳಲ್ಲಿಯೂ ಯುವಜನೋತ್ಸವ ನಡೆಯಬೇಕಿದೆ.
2023ನೇ ನವೆಂಬರ್ 17 ಶುಕ್ರವಾರ ಸಂಜೆ 5 ಗಂಟೆಗೆ ಸಿದ್ಧಾಪುರದಲ್ಲಿ ನಡೆಯುವ
ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಕೊಳಕೇರಿಯವರ ಅಧ್ಯಕ್ಷತೆಯಲ್ಲಿ ರಾಜ್ಯಾಧ್ಯಕ್ಷರಾದ ಹಫೀಳ್ ಸಅದಿಯವರು ಉದ್ಘಾಟಿಸಲಿದ್ದಾರೆ.
ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಶಿಹಾಬುದ್ದೀನ್ ಅಲ್ ಐದರೂಸಿ (ಕಿಲ್ಲೂರ್ ತಂಙಳ್), SYS ರಾಜ್ಯ ನಾಯಕ ಸಯ್ಯಿದ್ ಇಲ್ಯಾಸ್ ಸಖಾಫಿ ಅಲ್ ಐದರೂಸಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಸೇರಿದಂತೆ ಹಲವು ಧಾರ್ಮಿಕ, ಮತ್ತು ಸಾಮಾಜಿಕ, ರಾಜಕೀಯ ನಾಯಕರುಗಳು ಭಾಗವಹಿಸುವಾಗ ವಹ್ಹಾಬ್ ಸಖಾಫಿ ಮಂಬಾಡ್ ಹಾಗೂ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಕಕ್ಕಿಂಜೆ ಮುಖ್ಯ ಭಾಷಣ ಮಾಡಲಿದ್ದಾರೆ.
ಗೋಷ್ಠಿಯಲ್ಲಿ ಹಾಜರಿದ್ದವರು :
ಸಯ್ಯಿದ್ ಇಲ್ಯಾಸ್ ಸಖಾಫಿ ಅಲ್ ಐದರೂಸಿ
ಹಮೀದ್ ಮುಸ್ಲಿಯಾರ್ ಕೊಳಕೇರಿ
ವಿ.ಪಿ.ಮೊಯ್ದೀನ್ ಪೊನ್ನತ್ ಮೊಟ್ಟೆ
ಅಹ್ಮದ್ ಮದನಿ ಗುಂಡಿಕೆರೆ
ಅಬ್ದುಲ್ಲ ನೆಲ್ಯಹುದಿಕೇರಿ
ಶಾಫಿ ಸಅದಿ ಸೋಮವಾರಪೇಟೆ
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ