ಉಡುಪಿ: ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ತಾಯಿ ಹಾಗೂ ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆಗೈದ ನರ ಹಂತಕನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ, ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯನ್ನು ಅಭಿನಂದಿಸಿರುವ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ರಾಜ್ಯ ಸರಕಾರ ವನ್ನು ಆಗ್ರಹಿಸಿದ್ದಾರೆ.
ಪ್ರಕರಣದಲ್ಲಿ ಈವರೆಗಿನ ಪೊಲೀಸರ ಕಾರ್ಯವೈಖರಿ ಅಭಿನಂದನಾರ್ಹವಾಗಿದ್ದು, ಪೊಲೀಸರ ಮೇಲೆ ಜನರಿಗಿರುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಸರ್ಕಾರವು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಬೆಂಗಳೂರಿನ ಚರ್ಚ್ ಬಾಂಬ್ ಸ್ಪೋಟ ವಿಶೇಷ ನ್ಯಾಯಾಲಯದಲ್ಲಿ ಸದ್ಯ ಯಾವುದೇ ಪ್ರಕರಣ ವಿಚಾರಣೆಗೆ ಬಾಕಿ ಇಲ್ಲದಿರುವ ಹಿನ್ನೆಲೆಯಲ್ಲಿ ನೇಜಾರು ಕೊಲೆ ಪ್ರಕರಣವನ್ನು ಈ ವಿಶೇಷ ನ್ಯಾಯಾಲಯಕ್ಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ವಿಶೇಷ ನ್ಯಾಯಾಲಯವನ್ನು ಪೀಠಾಸೀನಾಧಿಕಾರಿ, ಪೂರಕ ಸಿಬ್ಬಂದಿ ಮತ್ತು ಪೀಠೋಪಕರಣ ಇತ್ಯಾದಿಗಳೊಂದಿಗೆ ಈ ಪ್ರಕರಣ ವಿಲೇವಾರಿ ಆಗುವ ತನಕ ಉಡುಪಿಗೆ ಸ್ಥಳಾಂತರಿಸಬೇಕು ಮತ್ತು ಪ್ರಕರಣಕ್ಕೆ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯದಾನ ದೊರಕಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ