ಉಡುಪಿ: ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನ ತಾಯಿ ಹಾಗೂ ಮೂರು ಮಕ್ಕಳನ್ನು ಅಮಾನುಷವಾಗಿ ಹತ್ಯೆಗೈದ ನರ ಹಂತಕನನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ, ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯನ್ನು ಅಭಿನಂದಿಸಿರುವ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ರಾಜ್ಯ ಸರಕಾರ ವನ್ನು ಆಗ್ರಹಿಸಿದ್ದಾರೆ.
ಪ್ರಕರಣದಲ್ಲಿ ಈವರೆಗಿನ ಪೊಲೀಸರ ಕಾರ್ಯವೈಖರಿ ಅಭಿನಂದನಾರ್ಹವಾಗಿದ್ದು, ಪೊಲೀಸರ ಮೇಲೆ ಜನರಿಗಿರುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಸರ್ಕಾರವು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಬೆಂಗಳೂರಿನ ಚರ್ಚ್ ಬಾಂಬ್ ಸ್ಪೋಟ ವಿಶೇಷ ನ್ಯಾಯಾಲಯದಲ್ಲಿ ಸದ್ಯ ಯಾವುದೇ ಪ್ರಕರಣ ವಿಚಾರಣೆಗೆ ಬಾಕಿ ಇಲ್ಲದಿರುವ ಹಿನ್ನೆಲೆಯಲ್ಲಿ ನೇಜಾರು ಕೊಲೆ ಪ್ರಕರಣವನ್ನು ಈ ವಿಶೇಷ ನ್ಯಾಯಾಲಯಕ್ಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ವಿಶೇಷ ನ್ಯಾಯಾಲಯವನ್ನು ಪೀಠಾಸೀನಾಧಿಕಾರಿ, ಪೂರಕ ಸಿಬ್ಬಂದಿ ಮತ್ತು ಪೀಠೋಪಕರಣ ಇತ್ಯಾದಿಗಳೊಂದಿಗೆ ಈ ಪ್ರಕರಣ ವಿಲೇವಾರಿ ಆಗುವ ತನಕ ಉಡುಪಿಗೆ ಸ್ಥಳಾಂತರಿಸಬೇಕು ಮತ್ತು ಪ್ರಕರಣಕ್ಕೆ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯದಾನ ದೊರಕಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ