ಕಾಜೂರು: ಕಾಜೂರು ದರ್ಗಾ ಸಮಿತಿ ಅಧೀನದ ವಿದ್ಯಾ ಸಂಸ್ಥೆಗಳಾದ ರಾಹ ಪಬ್ಲಿಕ್ ಸ್ಕೂಲ್, ಹೈಸ್ಕೂಲ್, ಪಿಯುಸಿ ಮತ್ತು ಶರೀಅತ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಖ್ಯಾತ ತರಬೇತುದಾರರಾದ ರಫೀಕ್ ಮಾಸ್ಟರ್ ರವರಿಂದ ವಿಶೇಷ ತರಬೇತಿ ಕಾರ್ಯಾಗಾರ 15.11.2023ರಂದು ಕಾಜೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಯು. ಇಬ್ರಾಹಿಂ ರವರ ಅಧ್ಯಕ್ಷತೆಯಲ್ಲಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು.


ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು. ಸಂಸ್ಥೆಯಲ್ಲಿ 2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ನಿಶಾ ಹಾಗೂ ಮುಹಮ್ಮದ್ ಸುಹೈಬ್, ಪಿಯುಸಿಯಲ್ಲಿ ಖತೀಜಾ ಬರೀರಾ ಹಾಗೂ ಫೌಝಿಯಾರವರನ್ನು ಸನ್ಮಾನಿಸಲಾಯಿತು.
ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷರಾದ ಬದ್ರುದ್ದೀನ್, ಶಿಕ್ಷಣ ಸಂಸ್ಥೆಯ ಚೇರ್ಮೆನ್, ದರ್ಗಾ ಪ್ರದಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳಾದ ಆಸಿಫ್, ಶರೀಫ್ ಹೈಟೆಕ್, ಮುಸ್ತಫ ಡಿ ಎಚ್, ನವಾಝ್ ಎನ್.ಎಂ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಂಶಾದ್.ಎ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮದ್ರಸ ಸದರ್ ಉಸ್ತಾದ್ ಜಮಾಲ್ ಲತೀಫಿ ದುಆ ನೆರವೇರಿಸಿದರು. ಸಂಸ್ಥೆಯ ಅಧ್ಯಾಪಕರಾದ ಸ್ವಾದಿಕ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರೀಅತ್ ಕಾಲೇಜು ಉಪ ಪ್ರಾಂಶುಪಾಲರಾದ ಅಬ್ದುರ್ರಹ್ಮಾನ್ ಸಅದಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ