ರಿಯಾದ್: ಸೌದಿ ನೇತೃತ್ವದ ದೇಶಗಳ ವಿಶೇಷ ತಂಡ ಸೋಮವಾರ ಚೀನಾಕ್ಕೆ ಆಗಮಿಸಲಿದೆ. ಗಾಝಾದಲ್ಲಿ ಕದನ ವಿರಾಮಕ್ಕಾಗಿ ಒತ್ತಡವನ್ನು ಹೆಚ್ಚಿಸುವುದು ಗುರಿಯಾಗಿದೆ ಎಂದು ಸೌದಿ ವಿದೇಶಾಂಗ ಸಚಿವರು ಹೇಳಿದರು.
ಕಳೆದ ವಾರ ನಡೆದ ಅರಬ್ ಇಸ್ಲಾಮಿಕ್ ರಾಷ್ಟ್ರಗಳ ತುರ್ತು ಸಭೆಯ ನಿರ್ಧಾರವನ್ನು ಜಾರಿಗೆ ತರಲಾಗುತ್ತಿದೆ. ಈ ತಂಡವು ಯುಎನ್ ಸೆಕ್ಯುರಿಟಿ ಕೌನ್ಸಿಲ್ ಸದಸ್ಯ ರಾಷ್ಟ್ರಗಳು ಮತ್ತು ಪ್ರಭಾವಿ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದೆ. ಪ್ಯಾಲೆಸ್ಟೈನ್, ಜೋರ್ಡಾನ್, ಈಜಿಪ್ಟ್, ಕತಾರ್, ಟರ್ಕಿ, ಇಂಡೋನೇಷ್ಯಾ ಮತ್ತು ನೈಜೀರಿಯಾದ ವಿದೇಶಾಂಗ ಮಂತ್ರಿಗಳು ತಂಡದಲ್ಲಿದ್ದಾರೆ.
ಪ್ಯಾಲೆಸ್ತೀನ್ ಹತ್ಯಾಕಾಂಡಕ್ಕೆ ಅಮೆರಿಕವೇ ಸಂಪೂರ್ಣ ಹೊಣೆ ಎಂದು ಹಮಾಸ್ ನಾಯಕ ಒಸಾಮಾ ಹಮ್ದಾನ್ ಹೇಳಿದ್ದಾರೆ. ಮಕ್ಕಳು ಮತ್ತು ಮಹಿಳೆಯರನ್ನು ಹಸಿವಿನಿಂದ ಸಾಯಿಸುವುದು ಇಸ್ರೇಲ್ ನೀತಿ. ಅಂತರಾಷ್ಟ್ರೀಯ ಸಮುದಾಯದ ಮುಂದುವರಿದ ಮೌನವು ಇಸ್ರೇಲಿನ ಅನಿಯಂತ್ರಿತ ಹಿಂಸಾಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ. ಶತ್ರುಗಳ ವಿರುದ್ಧದ ಹೋರಾಟ ನಡೆಯಿಂದ ಹಿಂದೆ ಸರಿಯುವುದಿಲ್ಲ. ಪ್ಯಾಲೆಸ್ತೀನ್ನ ಸ್ವಾತಂತ್ರ್ಯ ಮತ್ತು ಭೂಮಿಯ ಮೇಲಿನ ಹಕ್ಕುಗಳನ್ನು ಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಹಮ್ದಾನ್ ಸ್ಪಷ್ಟಪಡಿಸಿದ್ದಾರೆ.
ಇಸ್ರೇಲ್ ದಾಳಿಯಲ್ಲಿ ಗಾಝಾದಲ್ಲಿ 12,000 ಜನರು ಮೃತಪಟ್ಟಿದ್ದಾರೆ.ಕೊಲ್ಲಲ್ಪಟ್ಟವರಲ್ಲಿ 5,000 ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು. ವೈದ್ಯರು ಮತ್ತು ದಾದಿಯರು ಸೇರಿದಂತೆ 200 ಆರೋಗ್ಯ ಕಾರ್ಯಕರ್ತರು ಮತ್ತು 51 ಪತ್ರಕರ್ತರು ಕೊಲ್ಲಲ್ಪಟ್ಟರು. ಶುದ್ಧ ನೀರಿನ ಕೊರತೆಯಿಂದ 30,000 ಜನರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ. 1800 ಮಕ್ಕಳು ಸೇರಿದಂತೆ 3750 ಮಂದಿ ನಾಪತ್ತೆಯಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ