ರಿಯಾದ್ : ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಸೇವೆ ಸಲ್ಲಿಸುತ್ತಿರುವ ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ರಿಯಾದ್ ಘಟಕದ ರಚನೆ ದಿನಾಂಕ ಇತ್ತೀಚೆಗೆ ರಿಯಾದ್ ಅಲ್ ಬತ್ತಾದಲ್ಲಿರುವ ಲುಹಾ ಆಡಿಟೋರಿಯಂನಲ್ಲಿ ಮಸ್ದರ್ ಕಾರ್ಯಾಧ್ಯಕ್ಷರಾದ ಅಬೂಸುಫ್ಯಾನ್ H.I. ಇಬ್ರಾಹಿಂ ಮದನಿಯವರ ನೇತೃತ್ವದಲ್ಲಿ ಜರಗಿತು.
ಅಬ್ದುಲ್ಲಾ ಮದನಿ ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಿ.ಕೆ.ಎಸ್.ಸಿ. ರಿಯಾದ್ ಘಟಕದ ದಾಈ ಖಲೀಲ್ ಝುಹ್ರಿ ಖಿರಾಅತ್ ಪಾರಾಯಣಗೈದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಇವರು ಉತ್ತರ ಕರ್ನಾಟಕದ ಮುಸ್ಲಿಮರ ಧಾರ್ಮಿಕತೆಯ ಅಭಿವೃದ್ದಿಗಾಗಿ ಪ್ರತಿಯೊಬ್ಬರೂ ಮಸ್ದರ್ ಸಂಸ್ಥೆಯೊಂದಿಗೆ ಎಲ್ಲಾ ರೀತಿಯಿಂದಲೂ ಸಹಕರಿಸುವ ಅಗತ್ಯಕತೆಯನ್ನು ಒತ್ತಿ ಹೇಳುತ್ತಾ ಸಭೆಯನ್ನು ಉದ್ಘಾಟಿಸಿದರು.
ಮಸ್ದರ್ ಎಜ್ಯು ಆಂಡ್ ಚಾರಿಟಿ ಇದರ ಕಾರ್ಯಾಧ್ಯಕ್ಷರಾದ ಅಬುಸುಫ್ಯಾನ್ H.I. ಇಬ್ರಾಹಿಂ ಮದನಿಯವರು ಮಾತನಾಡುತ್ತಾ
ಉತ್ತರ ಕರ್ನಾಟಕದ ಮುಸ್ಲಿಮರ ಧಾರ್ಮಿಕ ಮೌಢ್ಯತೆ ಹಾಗೂ ಆರ್ಥಿಕ ಸಂಕಷ್ಟವನ್ನು ಸಾಕ್ಷ್ಯಚಿತ್ರದ ಮೂಲಕ ವಿವರಿಸುತ್ತಾ, ಅಲ್ಲಿನ ಮುಸ್ಲಿಮರ ನಿಸ್ಸಹಾಯಕ ಪರಿಸ್ಥಿತಿಯನ್ನು ಗಮದಲ್ಲಿಟ್ಟು ಅದಕ್ಕೆ ಪರಿಹಾರವಾಗಿ ಮಸ್ದರ್ ಸಂಸ್ಥೆ ಮಾಡುತ್ತಿರುವ ಶ್ಲಾಘನೀಯ ಶಿಕ್ಷಣ ಹಾಗೂ ಸಾಮಾಜಿಕ ಕ್ರಾಂತಿಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಸಭೆಯಲ್ಲಿ ಮಸ್ದರ್ ರಿಯಾದ್ ಘಟಕವನ್ನು ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕಾಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಸಮೀರ್ ಹಾಸನ, ಕೋಶಾಧಿಕಾರಿಯಾಗಿ ಸ್ವಾಲಿಹ್ ಮುಕ್ಕಾ, ಉಪಾಧ್ಯಕ್ಷರುಗಳಾಗಿ ನಝೀರ್ ಜಯಪುರ ಹಾಗೂ ಅಶ್ರಫ್ ಮುಕ್ಕಾ, ಕಾರ್ಯದರ್ಶಿಯಾಗಿ ಸೈಫುಲ್ಲಾಹ್ ಕಾಟಿಪಳ್ಳ, ಸಲಹೆಗಾರರಾಗಿ ದಾವೂದ್ ಕಜಮಾರ್, ಅಬ್ದುಲ್ ಅಝೀಝ್ ಬಜ್ಪೆ, ಯೂಸುಫ್ ಕಳಂಜಿಬೈಲ್ ಆಯ್ಕೆಗೊಂಡರು.
ನೂತನ ಪ್ರಧಾನ ಕಾರ್ಯದರ್ಶಿ ಸಮೀರ್ ಹಾಸನ ಧನ್ಯವಾದಗೈದು ಅಬ್ದುಲ್ ಅಝೀಝ್ ಬಜ್ಪೆ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ