ಬೆಂಗಳೂರು: ವಿವಿಧ ರಾಜ್ಯಗಳ 11 ಜನ ಜೆಡಿಎಸ್ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಡೆಡ್ ಲೈನ್ ನನ್ನು ನೀಡಲಾಗಿದೆ.
ಈ ಮೈತ್ರಿಗೆ ವಿವಿಧ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿದ್ದು, ಡಿಸೆಂಬರ್ 9 ರ ಒಳಗಾಗಿ ಮೈತ್ರಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಅಸಮಾಧಾನಿತರು ತಿಳಿಸಿದ್ದಾರೆ. ಮೈತ್ರಿಯಿಂದ ಜೆಡಿಎಸ್ ಹಿಂದೆ ಸರಿಯದೇ ಇದ್ದಲ್ಲಿ ಡಿ. 9 ರಂದು ಸಭೆ ಕರೆದು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಸೇರಿದಂತೆ ಜೆಡಿಎಸ್ ಸಕ್ರಿಯವಾಗಿರುವ ರಾಜ್ಯಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ನಾಣು ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರಿಗೆ ಪತ್ರವನ್ನು ಬರೆದು, ಮೈತ್ರಿ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು.
ಈ ಪತ್ರದ ಬೆನ್ನಲ್ಲೇ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ಮಾಡಲಾಯಿತು. ಈ ನಡುವೆ ಸಿಎಂ ಇಬ್ರಾಹಿಂ ವಿವಿಧ ರಾಜ್ಯಗಳ ಜೆಡಿಎಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರೀಯ ಕಾರ್ಯಕಾರಣಿ ಸಭೆಯೂ ನಡೆದಿದೆ.
ಎಚ್ಡಿಕೆ ಜತೆ ಯಾರೂ ಉಳಿದಿಲ್ಲ-ಸಿಎಂ
ಸಭೆಯ ಕುರಿತಾಗಿ ಮಾತನಾಡಿರುವ ಜೆಡಿಎಸ್ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ” ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ 11 ಜನ ರಾಜ್ಯಾಧ್ಯಕ್ಷರು ಭಾಗಿಯಾಗಿದ್ದರು. ಇದರಿಂದ ಎಚ್ಡಿ ಕುಮಾರಸ್ವಾಮಿ ಅವರು ಗಾಬರಿ ಬಿದ್ದಿದ್ದಾರೆ. ಇವರ ಜೊತೆ ಯಾರು ಉಳಿದಿಲ್ಲ ” ಎಂದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ನಾಣು ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. ನಮಗೆ ಮೈತ್ರಿ ಕುರಿತು ಕೇಳಿಲ್ಲ. ಮಗನಿಗಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಅಲ್ಲದೆ, ಡಿ. 9 ರಂದು ಸಭೆ ಕರೆದು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡೋಣ ಅಂತ ತೀರ್ಮಾನ ಮಾಡಿದ್ದಾರೆ ಎಂದು ಇಬ್ರಾಹಿಂ ತಿಳಿಸಿದ್ದಾರೆ.
ಒಟ್ಟಿನಲ್ಲಿ ಜೆಡಿಎಸ್ ಪಕ್ಷದ ವರಿಷ್ಠರ ನಡೆಗೆ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಬೇರೆ ರಾಜ್ಯಗಳಲ್ಲಿ ಪಕ್ಷಗಳನ್ನು ಉಳಿಸುವ ನಿಟ್ಟಿನಲ್ಲಿ ದೇವೇಗೌಡರು ಯಾವ ಹೆಜ್ಜೆಯನ್ನು ಇಡುತ್ತಾರೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ