ಬೆಂಗಳೂರು: ವಿಧಾನಸಭೆ ಚುನಾವಣೆಯ ನಂತರ ಬಹುಕಾಲದಿಂದ ಚಾಲ್ತಿಯಲ್ಲಿದ್ದ ಹತ್ತಾರು ಗೊಂದಲಗಳು ಮತ್ತು ಲೆಕ್ಕಾಚಾರಕ್ಕೆ ಬುಧವಾರ ಸಂಜೆ 4.30ಕ್ಕೆ ದೇವರು ಮತ್ತು ಕನ್ನಡ ನಾಡಿನ ಜನರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ತೆರೆ ಎಳೆದರು.
ಕೊರಟಗೆರೆ ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ನಂತರ ಕುಮಾರಸ್ವಾಮಿ ತಾಯಿ ಚೆನ್ನಮ್ಮ ಅವರ ಪಾದಕ್ಕೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ವಿವಿಧ ರಾಜ್ಯಗಳ ತೃತೀಯ ರಂಗದ ನಾಯಕರು ಪರಸ್ಪರ ಕೈಕುಲುಕುವ ಮೂಲಕ ಬಿಜೆಪಿ ವಿರುದ್ಧದ ಮಹಾಮೈತ್ರಿಯ ಅಲೆಯ ಸ್ಪಷ್ಟ ಸೂಚನೆ ನೀಡಿದರು.
ಮುಂಜಾನೆಯಿಂದಲೂ ನಗರದಲ್ಲಿ ಮಳೆ ಸುರಿಯುತ್ತಲೇ ಇತ್ತು. ನೆಚ್ಚಿನ ನಾಯಕನ ಅಧಿಕಾರ ಸ್ವೀಕಾರ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಲಕ್ಷಾಂತರ ಜನರಿಗೆ ಮಳೆಹನಿಗಳ ಸಿಂಚನವೂ ಉತ್ಸಾಹ ಹೆಚ್ಚಿಸಿತು.
ಜೆ.ಪಿ.ನಗರದಿಂದ ವಿಧಾನಸೌಧದತ್ತ ಹೊರಟ ಕುಮಾರಸ್ವಾಮಿ ಮಳೆಯನ್ನು ಸ್ವಾಗತಿಸಿದ್ದರು. ‘ದೇವರ ಆಶೀರ್ವಾದ ನಮಗಿದೆ. ನಾಡಿನಲ್ಲಿ ಮುಂದೆ ಒಳ್ಳೆಯದು ಆಗಲಿದೆ ಎಂಬುದರ ಸೂಚಕ ಇದು’ ಎಂದು ಖುಷಿ ತುಳುಕಿಸುತ್ತಲೇ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಜೊತೆಗೂಡಿ ಕಾರು ಹತ್ತಿದ್ದರು. ದೇವೇಗೌಡರು ಪತ್ನಿ ಚೆನ್ನಮ್ಮ ಮತ್ತು ಕುಟುಂಬದ ಇತರ ಸದಸ್ಯರ ಜೊತೆಗೂಡಿ ವಿಧಾನಸೌಧಕ್ಕೆ ಬಂದರು.
ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ನಗುನಗುತ್ತಾ ದೇವೇಗೌಡರನ್ನು ಎದುರುಗೊಂಡು ಮಾತನಾಡಿದ್ದು ಎದ್ದು ಕಂಡಿತು. ತಮ್ಮತಮ್ಮ ರಾಜ್ಯಗಳಲ್ಲಿ ಬದ್ಧ ವೈರಿಗಳಾಗಿರುವ ಅನೇಕರು ವಿಧಾನಸೌಧದ ಎದುರು ಕೈಕುಲುಕಿ ಬಿಜೆಪಿ ವಿರುದ್ಧ ಮಹಾಮೈತ್ರಿಯ ಸ್ಪಷ್ಟ ಮುನ್ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಎಸ್ಪಿ ನಾಯಕಿ ಮಾಯಾವತಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್ ಯಾದವ್, ಗುಲಾಬ್ ನಬೀ ಅಜಾದ್, ಚಂದ್ರಬಾಬು ನಾಯ್ಡು, ಸೀತಾರಾಂ ಯೆಚೂರಿ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಪಾಲ್ಗೊಂಡಿದ್ದರು.
ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ‘ಅಧಿಕಾರ ಸೂತ್ರ’ ಕೈಗೆತ್ತಿಗೊಳ್ಳುವ ಸಂಭ್ರಮಕ್ಕೆ ದೇಶದ ತೃತೀಯ ರಂಗ ಸಾಕ್ಷಿಯಾಯಿತು.
ಮಧ್ಯಾಹ್ನದಿಂದಲೇ ಮೆಟ್ರೊ ರೈಲುಗಳು ತುಂಬಿ ತುಳುಕುತ್ತಿದ್ದವು. ಸಮಾರಂಭ ಮುಗಿದ ನಂತರ ಅಭಿಮಾನಿಗಳು ನೆಚ್ಚಿನ ನಾಯಕನ ಫ್ಲೆಕ್ಸ್ಗಳನ್ನು ಖುಷಿಯಿಂದ ಹೊತ್ತುಕೊಂಡು ಹೊರಟರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ